ಮೈಸೂರು ನಗರ

ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಸಂಸದ ಯದುವೀರ್‌

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಸ್ಪರ್ಧೆಯ ಪೋಸ್ಟರನ್ನು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೆಎಮ್‌ಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಅವರು ಸ್ಪರ್ಧೆಯ ಬಗ್ಗೆ ಮಾಹಿತಿ ನೀಡಿದರು. ಸ್ಪರ್ಧೆ ಮಾಡುವವರಿಗೆ 200 ರೂ ನೋಂದಣಿ ಶುಲ್ಕ ಇರುತ್ತದೆ. ದಸರಾ ಗೊಂಬೆ ಸ್ಪರ್ಧೆಯು ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನೆಲೆ ಒಳಗೊಂಂಡಿದೆ. ಗೊಂಬೆಗಳನ್ನು ಕೂರಿಸಿದ 10 ವಿಜೇತರಿಗೆ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು.

ಕಡೆಯ ದಿನಾಂಕ 2/10/2025 ರ ಒಳಗೆ 8971389539ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3 ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು

ಇದೇ ಸಂದರ್ಭದಲ್ಲಿ ಶಾಸ ಟಿ ಎಸ್ ಶ್ರೀವತ್ಸ, ಮಾಜಿ ಮಹಾಪೌರ ಶಿವಕುಮಾರ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಮುಖಂಡರಾದ ಮಹೇಶ್ ರಾಜ್ ಅರಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

3 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

3 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

3 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

3 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

3 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

3 hours ago