ಮೈಸೂರು ನಗರ

ಮುಡಾ ಹಗರಣ| ಸಾರ್ವಜನಿಕ ಸೇವಕರು ಅಧಿಕಾರ, ಪಾರದರ್ಶಕ ಆಡಳಿತ ಎತ್ತಿ ಹಿಡಿಯಬೇಕು: ಸಂಸದ ಯದುವೀರ್‌

ಮೈಸೂರು: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸಿ, ಪ್ರಕರಣದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಸೇವಕರಾಗಿರುವ ನಾಯಕರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಟ್ಟು ಅಧಿಕಾರ ಮತ್ತು ಪಾರದರ್ಶಕ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭ್ರಷ್ಟಾಚಾರವೆಂಬುದು ಪ್ರಜಾಪ್ರಭುತ್ವ ಮತ್ತು ಸಾರ್ವಜನಿಕ ನಂಬಿಕೆಯನ್ನು ಅಪಮೌಲ್ಯಗೊಳಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮತ್ತಿತರರು ಭಾಗಿಯಾಗಿರುವ ಮುಡಾ ಹಗರಣದ ಕಾಂಡಗಳು ಬಹಿರಂಗವಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ. ಈ ತನಿಖೆ ಸಂಪೂರ್ಣ ನಿಷ್ಪಕ್ಷವಾಗಿ ನಡೆಯಬೇಕೀದೆ. ಹೀಗಾಗಿ ಸಾರ್ವಜನಿಕ ಸೇವಕರಾಗಿರುವ ನಾಯಕರು, ಅಧಿಕಾರದ ಸಮಗ್ರತೆಯನ್ನು ಮತ್ತು ಪಾರದರ್ಶಕವಾದ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ತಮ್ಮ ಮೇಲಿನ ಆರೋಪಗಳು ನಿಜವೋ? ಸುಳ್ಳೊ? ಎಂಬುದನ್ನು ತಿಳಿಸಲು ಯಾವುದೇ ಪ್ರಭಾವವಿಲ್ಲದ ಮತ್ತು ನ್ಯಾಯಯುತ ತನಿಖೆಯನ್ನು ನಡೆಸಲು ಅವಕಾಶ ಮಾಡಿಕೊಡಬೇಕು. ಇಂತಹ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕಾಪಾಡಲು ಕೂಡಲೇ ಆ ಸ್ಥಾನಕ್ಕೆ ರಾಜಿನಾಮೆ ನೀಡಿ, ಜನತೆಯ ವಿಶ್ವಾಸವನ್ನು ಮರುಸ್ಥಾಪಿಸಬೇಕಿದೆ ಎಂದು ಹೇಳಿದ್ದಾರೆ.

ಶ್ರೀಮಂತ ಪರಂಪರೆ ಮತ್ತು ಪ್ರಗತಿಗೆ ಬದ್ಧತೆಗೆ ಹೆಸರುವಾಸಿಯಾದ ರಾಜ್ಯವಾಗಿ, ಈ ಸಮಸ್ಯೆಗಳನ್ನು ನಿರ್ಣಾಯಕವಾಗಿ ಪರಿಹರಿಸುವುದು ಕಡ್ಡಾಯವಾಗಿದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟವು ರಾಜಕೀಯ ವಿಭಜನೆಗಳನ್ನು ಮೀರುತ್ತದೆ ಮತ್ತು ಕರ್ನಾಟಕದ ಭವಿಷ್ಯವನ್ನು ರಕ್ಷಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯ ಬಗ್ಗೆ ಮಾತನಾಡುತ್ತದೆ. ಇದರಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ಸಮಗ್ರತೆಯಿಂದ ತನಿಖೆ ನಡಿಸುವುದು ಮತ್ತು ಯಾವುದೇ ವೈಯಕ್ತಿಯ ಅಥವಾ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲದೆ, ಜನರ ಹಿತಾಸಕ್ತಿಗೆ ಆದ್ಯತೆ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 mins ago

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

1 hour ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

3 hours ago