ಮೈಸೂರು ನಗರ

ಮುಡಾ ಹಗರಣ| ಸಾರ್ವಜನಿಕ ಸೇವಕರು ಅಧಿಕಾರ, ಪಾರದರ್ಶಕ ಆಡಳಿತ ಎತ್ತಿ ಹಿಡಿಯಬೇಕು: ಸಂಸದ ಯದುವೀರ್‌

ಮೈಸೂರು: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸಿ, ಪ್ರಕರಣದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಸೇವಕರಾಗಿರುವ ನಾಯಕರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಟ್ಟು ಅಧಿಕಾರ ಮತ್ತು ಪಾರದರ್ಶಕ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭ್ರಷ್ಟಾಚಾರವೆಂಬುದು ಪ್ರಜಾಪ್ರಭುತ್ವ ಮತ್ತು ಸಾರ್ವಜನಿಕ ನಂಬಿಕೆಯನ್ನು ಅಪಮೌಲ್ಯಗೊಳಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮತ್ತಿತರರು ಭಾಗಿಯಾಗಿರುವ ಮುಡಾ ಹಗರಣದ ಕಾಂಡಗಳು ಬಹಿರಂಗವಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ. ಈ ತನಿಖೆ ಸಂಪೂರ್ಣ ನಿಷ್ಪಕ್ಷವಾಗಿ ನಡೆಯಬೇಕೀದೆ. ಹೀಗಾಗಿ ಸಾರ್ವಜನಿಕ ಸೇವಕರಾಗಿರುವ ನಾಯಕರು, ಅಧಿಕಾರದ ಸಮಗ್ರತೆಯನ್ನು ಮತ್ತು ಪಾರದರ್ಶಕವಾದ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ತಮ್ಮ ಮೇಲಿನ ಆರೋಪಗಳು ನಿಜವೋ? ಸುಳ್ಳೊ? ಎಂಬುದನ್ನು ತಿಳಿಸಲು ಯಾವುದೇ ಪ್ರಭಾವವಿಲ್ಲದ ಮತ್ತು ನ್ಯಾಯಯುತ ತನಿಖೆಯನ್ನು ನಡೆಸಲು ಅವಕಾಶ ಮಾಡಿಕೊಡಬೇಕು. ಇಂತಹ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕಾಪಾಡಲು ಕೂಡಲೇ ಆ ಸ್ಥಾನಕ್ಕೆ ರಾಜಿನಾಮೆ ನೀಡಿ, ಜನತೆಯ ವಿಶ್ವಾಸವನ್ನು ಮರುಸ್ಥಾಪಿಸಬೇಕಿದೆ ಎಂದು ಹೇಳಿದ್ದಾರೆ.

ಶ್ರೀಮಂತ ಪರಂಪರೆ ಮತ್ತು ಪ್ರಗತಿಗೆ ಬದ್ಧತೆಗೆ ಹೆಸರುವಾಸಿಯಾದ ರಾಜ್ಯವಾಗಿ, ಈ ಸಮಸ್ಯೆಗಳನ್ನು ನಿರ್ಣಾಯಕವಾಗಿ ಪರಿಹರಿಸುವುದು ಕಡ್ಡಾಯವಾಗಿದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟವು ರಾಜಕೀಯ ವಿಭಜನೆಗಳನ್ನು ಮೀರುತ್ತದೆ ಮತ್ತು ಕರ್ನಾಟಕದ ಭವಿಷ್ಯವನ್ನು ರಕ್ಷಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯ ಬಗ್ಗೆ ಮಾತನಾಡುತ್ತದೆ. ಇದರಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ಸಮಗ್ರತೆಯಿಂದ ತನಿಖೆ ನಡಿಸುವುದು ಮತ್ತು ಯಾವುದೇ ವೈಯಕ್ತಿಯ ಅಥವಾ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲದೆ, ಜನರ ಹಿತಾಸಕ್ತಿಗೆ ಆದ್ಯತೆ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago