ಮೈಸೂರು ನಗರ

ಮುಡಾ ಹಗರಣ| ಸಾರ್ವಜನಿಕ ಸೇವಕರು ಅಧಿಕಾರ, ಪಾರದರ್ಶಕ ಆಡಳಿತ ಎತ್ತಿ ಹಿಡಿಯಬೇಕು: ಸಂಸದ ಯದುವೀರ್‌

ಮೈಸೂರು: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸಿ, ಪ್ರಕರಣದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಸೇವಕರಾಗಿರುವ ನಾಯಕರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಟ್ಟು ಅಧಿಕಾರ ಮತ್ತು ಪಾರದರ್ಶಕ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭ್ರಷ್ಟಾಚಾರವೆಂಬುದು ಪ್ರಜಾಪ್ರಭುತ್ವ ಮತ್ತು ಸಾರ್ವಜನಿಕ ನಂಬಿಕೆಯನ್ನು ಅಪಮೌಲ್ಯಗೊಳಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮತ್ತಿತರರು ಭಾಗಿಯಾಗಿರುವ ಮುಡಾ ಹಗರಣದ ಕಾಂಡಗಳು ಬಹಿರಂಗವಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ. ಈ ತನಿಖೆ ಸಂಪೂರ್ಣ ನಿಷ್ಪಕ್ಷವಾಗಿ ನಡೆಯಬೇಕೀದೆ. ಹೀಗಾಗಿ ಸಾರ್ವಜನಿಕ ಸೇವಕರಾಗಿರುವ ನಾಯಕರು, ಅಧಿಕಾರದ ಸಮಗ್ರತೆಯನ್ನು ಮತ್ತು ಪಾರದರ್ಶಕವಾದ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ತಮ್ಮ ಮೇಲಿನ ಆರೋಪಗಳು ನಿಜವೋ? ಸುಳ್ಳೊ? ಎಂಬುದನ್ನು ತಿಳಿಸಲು ಯಾವುದೇ ಪ್ರಭಾವವಿಲ್ಲದ ಮತ್ತು ನ್ಯಾಯಯುತ ತನಿಖೆಯನ್ನು ನಡೆಸಲು ಅವಕಾಶ ಮಾಡಿಕೊಡಬೇಕು. ಇಂತಹ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕಾಪಾಡಲು ಕೂಡಲೇ ಆ ಸ್ಥಾನಕ್ಕೆ ರಾಜಿನಾಮೆ ನೀಡಿ, ಜನತೆಯ ವಿಶ್ವಾಸವನ್ನು ಮರುಸ್ಥಾಪಿಸಬೇಕಿದೆ ಎಂದು ಹೇಳಿದ್ದಾರೆ.

ಶ್ರೀಮಂತ ಪರಂಪರೆ ಮತ್ತು ಪ್ರಗತಿಗೆ ಬದ್ಧತೆಗೆ ಹೆಸರುವಾಸಿಯಾದ ರಾಜ್ಯವಾಗಿ, ಈ ಸಮಸ್ಯೆಗಳನ್ನು ನಿರ್ಣಾಯಕವಾಗಿ ಪರಿಹರಿಸುವುದು ಕಡ್ಡಾಯವಾಗಿದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟವು ರಾಜಕೀಯ ವಿಭಜನೆಗಳನ್ನು ಮೀರುತ್ತದೆ ಮತ್ತು ಕರ್ನಾಟಕದ ಭವಿಷ್ಯವನ್ನು ರಕ್ಷಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯ ಬಗ್ಗೆ ಮಾತನಾಡುತ್ತದೆ. ಇದರಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ಸಮಗ್ರತೆಯಿಂದ ತನಿಖೆ ನಡಿಸುವುದು ಮತ್ತು ಯಾವುದೇ ವೈಯಕ್ತಿಯ ಅಥವಾ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲದೆ, ಜನರ ಹಿತಾಸಕ್ತಿಗೆ ಆದ್ಯತೆ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

5 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

5 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

7 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

7 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

8 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

8 hours ago