ಮೈಸೂರು ನಗರ

ಪ್ರಿನ್ಸೆಸ್ ರಸ್ತೆ ಮರುನಾಮಕರಣ ಇತಿಹಾಸವನ್ನು ಅಳಿಸಿ ಹಾಕುತ್ತದೆ: ಸಂಸದ ಯದುವೀರ್‌

ಮೈಸೂರು: ನಗರದ ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗವೆಂದು ಮರುನಾಮಕರಣ ಮಾಡಿದರೆ ಇತಿಹಾಸದ ಪ್ರಮುಖ ಅಧ್ಯಾಯವನ್ನು ಅಳಿಸಿ ಹಾಕಿದಂತಾಗುತ್ತದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಸೂರು ರಾಜಮನೆತನದ ರಾಜಕುಮಾರಿಯರ ಸಾಮಾಜಿಕ ಕಳಕಳಿಯ ಗೌರವಾರ್ಥವಾಗಿ ಹೆಸರಿಸಲಾಗಿರುವ ಮಾರ್ಗ, ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಹೋದರಿಯರಾದ ಮಹಾರಾಜಕುಮಾರಿ ಜಯಲಕ್ಷ್ಮಮ್ಮಣ್ಣಿ, ಮಹಾರಾಜಕುಮಾರಿ ಕೃಷ್ಣಾಜಮ್ಮಣ್ಣಿ, ಮಹಾರಾಜಕುಮಾರಿ ಚೆಲುವಾಜಮ್ಮಣ್ಣಿ ಹಾಗೂ ಮಹಾರಾಜಕುಮಾರಿ ಕೃಷ್ಣಾಜಮ್ಮಣ್ಣಿ ಅವರ ಪತಿ ಕರ್ನಲ್ ದೇಸ ರಾಜ್ ಅರಸ್ ಅವರು ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಅದ್ಭುತ ಕೊಡುಗೆಯನ್ನು ಈ ರಸ್ತೆಯು ಸಂಕೇತಿಸುತ್ತದೆ ತಿಳಿಸಿದ್ದಾರೆ.

ಮಹಾರಾಜ 10ನೇ ಚಾಮರಾಜ ಒಡೆಯರ್ ಅವರ ಪುತ್ರಿಯರಾದ ಮಹಾರಾಜಕುಮಾರಿ ಜಯಲಕ್ಷ್ಮಿಯಮ್ಮಣ್ಣಿ, ಮಹಾರಾಜಕುಮಾರಿ ಕೃಷ್ಣಾಜಮ್ಮಣ್ಣಿ ಮತ್ತು ಮಹಾರಾಜಕುಮಾರಿ ಚೆಲುವಾಜಮ್ಮಣ್ಣಿ ಅವರುಗಳ ಸಾಮಾಜಿಕ ಕಾಳಜಿ, ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ 1921ರಲ್ಲಿ ಮಹಾರಾಜಕುಮಾರಿ ಕೃಷ್ಣಾಜಮ್ಮಣ್ಣಿ ಕ್ಷಯ ರೋಗ ಆಸ್ಪತ್ರೆ ಸ್ಥಾಪನೆಯು ಅವರ ನಿಸ್ವಾರ್ಥ ಸೇವೆ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಕುಟುಂಬದ ಸಮರ್ಪಣೆಗೆ ಈ ರಸ್ತೆ ಸಾಕ್ಷಿಯಾಗದೇ ಎಂದಿದ್ದಾರೆ.

ಈ ರಸ್ತೆಯ ಮರುನಾಮಕರಣವು ಇತಿಹಾಸದ ಪ್ರಮುಖ ಅಧ್ಯಾಯವನ್ನು ಅಳಿಸಿಹಾಕುತ್ತದೆ. ಅಲ್ಲದೇ ಮೈಸೂರು ರಾಜ ಮನೆತನದ ಸಾಮಾಜಿಕ ಕೊಡುಗೆಗಳ ಸ್ಮರಣೆಯನ್ನು ಮರೆತಂತಾಗುತ್ತದೆ. ಜೊತೆಗೆ ಐತಿಹಾಸಿಕ ನಗರ ಮೈಸೂರಿನ ಪರಂಪರೆಯನ್ನು ಶಾಶ್ವತವಾಗಿ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಹೀಗಾಗಿ ನಮ್ಮ ಹೆಮ್ಮೆಯ ಪರಂಪರೆಯನ್ನು ಗೌರವಿಸೋಣ ಮತ್ತು ಉಳಿಸೋಣ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago