ಮೈಸೂರು ನಗರ

ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಗಸ್ಟ್ ತಿಂಗಳಿನಲ್ಲಿ ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್ ಪರೀಕ್ಷೆಯ ಭಾಷಾಂತರದಲ್ಲಿ ಲೋಪವಾಗಿ ದೊಡ್ಡ ಎಡವಟ್ಟು ಮಾಡಿಕೊಂಡು ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇಷ್ಟು ವಿಳಂಬದ ನಂತರವೂ ಭಾನುವಾರದ(ಡಿ.29 ಮರುಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಮತ್ತೆ ಲೋಪ ಕಂಡು ಬಂದಿದೆ. ಅಲ್ಲದೇ ಒಎಂಆರ್ ಶೀಟ್ ಸಂಖ್ಯೆಗಳು ಅದಲು ಬದಲಾಗಿ ಮತ್ತೊಂದು ದೊಡ್ಡ ಅನಾಹುತಕ್ಕೆ ಎಡೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

‘ಕನ್ನಡದ ಅಸ್ಮಿತೆ’ ಗೆ ಬದ್ಧರಾಗಿದ್ದೆವೆ ಎಂದು ಹೇಳಿಕೊಳ್ಳುವ ಸರ್ಕಾರ ಇಂದು ಲಕ್ಷಾಂತರ ಮಂದಿ ಪರೀಕ್ಷಾರ್ಥಿಗಳ ಕನಸನ್ನು ನುಚ್ಚು ನೂರು ಮಾಡಿದೆ. ಕರ್ನಾಟಕದ ಮಾತೃ ಭಾಷೆಯಲ್ಲೇ ಸರಿಯಾದ ಪ್ರಶ್ನೆಗಳನ್ನು ನೀಡುವಲ್ಲಿ ಮತ್ತು ಭಾಷಾಂತರಿಸುವುದರಲ್ಲಿ ಎರಡು ಬಾರಿ ವಿಫಲವಾಗಿರುವ ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾದ ಕೆಪಿಎಸ್‌ಸಿಯೂ ಇನ್ನೆಷ್ಟು ಬಾರಿ ಪರಿಕ್ಷಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ? ಇಂತಹ ಗೊಂದಲಗಳು ಬೇಜವಾಬ್ದಾರಿತನ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಬೇಕಾಗಿರುವುದು ಸರ್ಕಾರದ ಕರ್ತವ್ಯ ಎಂದು ಆಗ್ರಹಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

37 mins ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

2 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

2 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

2 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

3 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

3 hours ago