ಮೈಸೂರು ನಗರ

ಕಿರಿಯ ಪುತ್ರನಿಗೆ ತೊಟ್ಟಿಲು ಶಾಸ್ತ್ರ ನೆರವೇರಿಸಿದ ಸಂಸದ ಯದುವೀರ್‌, ತ್ರಿಷಿಕಾ ದಂಪತಿ

ಮೈಸೂರು: ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಕಿರಿಯ ಪುತ್ರನಿಗೆ ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ.

ಮೈಸೂರು ದಸರಾ ಸಂದರ್ಭದಲ್ಲಿ ಆಯುಧಪೂಜೆ ದಿನದಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ತ್ರಿಷಿಕಾ ದಂಪತಿಗೆ ಎರಡನೇ ಪುತ್ರ ಜನಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಬೆಳಿಗ್ಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದ್ದಾರೆ.

ಈ ಕುರಿತು ಚಾಮುಂಡೇಶ್ವರಿ ದೇವಿಗೆ ಪೂಜೆ ಕಾರ್ಯಕ್ರಮಗಳು ಮುಗಿದ ಬಳಿಕ ದೇವಾಲಯದ ಆವರಣದಲ್ಲಿರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಸಲ್ಲಿಸಿದ್ದಾರೆ. ಆ ನಂತರ ತಮ್ಮ ಎರಡನೇ ಮಗನನ್ನು ತೊಟ್ಟಿಲಿಗೆ ಹಾಕಿ ತೊಟ್ಟಿಲು ಶಾಸ್ತ್ರವನ್ನು ನೆರವೇರಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ರಾಜ ಮಾತೆ ಪ್ರಮೋದಾದೇವಿ ಒಡೆಯರ್‌ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ತ್ರಿಷಿಕಾ ದೇವಿಯವರ ಪ್ರಥಮ ಪುತ್ರ ಆದ್ಯವೀರ್‌ ಉಪಸ್ಥಿತರಿದ್ದರು.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago