ಮೈಸೂರು ನಗರ

ಕಿರಿಯ ಪುತ್ರನಿಗೆ ತೊಟ್ಟಿಲು ಶಾಸ್ತ್ರ ನೆರವೇರಿಸಿದ ಸಂಸದ ಯದುವೀರ್‌, ತ್ರಿಷಿಕಾ ದಂಪತಿ

ಮೈಸೂರು: ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಕಿರಿಯ ಪುತ್ರನಿಗೆ ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ.

ಮೈಸೂರು ದಸರಾ ಸಂದರ್ಭದಲ್ಲಿ ಆಯುಧಪೂಜೆ ದಿನದಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ತ್ರಿಷಿಕಾ ದಂಪತಿಗೆ ಎರಡನೇ ಪುತ್ರ ಜನಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಬೆಳಿಗ್ಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದ್ದಾರೆ.

ಈ ಕುರಿತು ಚಾಮುಂಡೇಶ್ವರಿ ದೇವಿಗೆ ಪೂಜೆ ಕಾರ್ಯಕ್ರಮಗಳು ಮುಗಿದ ಬಳಿಕ ದೇವಾಲಯದ ಆವರಣದಲ್ಲಿರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಸಲ್ಲಿಸಿದ್ದಾರೆ. ಆ ನಂತರ ತಮ್ಮ ಎರಡನೇ ಮಗನನ್ನು ತೊಟ್ಟಿಲಿಗೆ ಹಾಕಿ ತೊಟ್ಟಿಲು ಶಾಸ್ತ್ರವನ್ನು ನೆರವೇರಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ರಾಜ ಮಾತೆ ಪ್ರಮೋದಾದೇವಿ ಒಡೆಯರ್‌ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ತ್ರಿಷಿಕಾ ದೇವಿಯವರ ಪ್ರಥಮ ಪುತ್ರ ಆದ್ಯವೀರ್‌ ಉಪಸ್ಥಿತರಿದ್ದರು.

ಅರ್ಚನ ಎಸ್‌ ಎಸ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

5 mins ago

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

15 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

16 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

17 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

18 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

18 hours ago