ಮೈಸೂರು ನಗರ

ಪ್ರಿನ್ಸೆಸ್‌ ರಸ್ತೆ ಎಂಬುದಕ್ಕೆ ದಾಖಲೆಗಳಿಲ್ಲ ಎಂದ ಆಯುಕ್ತರು: ದಾಖಲೆಗಳನ್ಮೊಮ್ಮೆ ಸರಿಯಾಗಿ ಪರಿಶೀಲಿಸಬೇಕೆಂದು ಸಂಸದ ಯದುವೀರ್‌ ಟಾಂಗ್‌

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಈ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಟಾಂಗ್‌ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಆರ್‌ಎಸ್‌ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಬಗ್ಗೆ ಉಲ್ಲೇಖಗಳಿಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ ಈ ದಾಖಲೆಗಳನ್ನೊಮ್ಮೆ ನೋಡಿ. ಮೈಸೂರು ಸಂಸ್ಥಾನದ ದಿವಾನರಾದ ಮಿರ್ಜಾ ಇಸ್ಮಾಯಿಲ್ ಅವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆ ಎಂದು ಕರೆಯಲ್ಪಡುವ ಸ್ಥಳದಲ್ಲಿ ವಾಸಿಸುತ್ತಿದ್ದರು. ಈ ವಿಳಾಸದಿಂದ ಕಳುಹಿಸಲಾದ ಪತ್ರಗಳು ಸಹ ಪ್ರಿನ್ಸೆಸ್‌ ರಸ್ತೆಯ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದು ತಿಳಿಸಿದ್ದಾರೆ.

ಭಾರತ ಸರ್ಕಾರದ ಸರ್ವೆ ಮತ್ತು ಮ್ಯಾಪಿಂಗ್ ಹೊಂದಿರುವ ಸರ್ಕಾರಿ ಇಲಾಖೆಯವರು ಅಧಿಕೃತವಾಗಿ ಪ್ರಕಟಿಸಿರುವ ಮೈಸೂರು ಪ್ರವಾಸದ ನಕ್ಷೆ/ಮಾರ್ಗದರ್ಶಿಯಲ್ಲಿರುವ ಮೈಸೂರಿನ ನಕ್ಷೆಯಲ್ಲಿಯೂ ಸಹ ಪ್ರಿನ್ಸೆಸ್‌ ರಸ್ತೆ ಎಂದು ಸ್ಪಷ್ಟವಾಗಿ ಗುರುತಿಸಿ ಹೆಸರುಸಲಾಗಿದೆ. ಇನ್ನೂ ಅಧಿಕೃತವಾಗಿ ಮೈಸೂರು ನಗರಾಭಿವೃದ್ಧಿ ಟ್ರಸ್ಟ್ ಬೋರ್ಡ್ ಈ ರಸ್ತೆಯನ್ನು ಔಪಚಾರಿಕವಾಗಿ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ 1921ರ ದಾಖಲೆಗಳು ದೃಢಪಡಿಸುತ್ತವೆ. ಹೀಗಾಗಿ ಈ ಮೇಲಿನ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದರೆ, ಯೋಗ್ಯವಾದ ಗಮನಾರ್ಹ ಪುರಾವೆಗಳನ್ನು ಒದಗಿಸುತ್ತವೆ ಎಂದು ತಿರುಗೇಟು ನೀಡಿದ್ದಾರೆ.

ಈ ರಸ್ತೆಗೆ ಮರುನಾಮಕರಣವನ್ನು ಪ್ರಸ್ತಾಪಿಸುವ ಮೂಲಕ ಅನಗತ್ಯ ಗೊಂದಲವನ್ನು ಸೃಷ್ಟಿಸುವ ಬದಲು, ರಸ್ತೆಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒಪ್ಪಿಕೊಳ್ಳುವುದು ಅತ್ಯಗತ್ಯ. ಅದರ ಮೂಲಗಳನ್ನು ಪರಿಶೀಲಿಸಿ, ಅಂದಿನ ರಾಜಮನೆತನ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಗೌರವಿಸಬೇಕು. ಅವರ ಪರಂಪರೆಯನ್ನು ಕಾಲ ಕಾಲಕ್ಕೂ ಶಾಶ್ವತವಾಗಿ ಸಂರಕ್ಷಿಸಿರುವುದನ್ನು ಮತ್ತು ಮುಂದಿನ ಪೀಳಿಗೆಗೆ ಈ ಪರಂಪರೆಯನ್ನು ಪರಿಚಯಿಸುವುದು ಪಾಲಿಕೆ ಹಾಗೂ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago