ಮೈಸೂರು ನಗರ

ಪ್ರಿನ್ಸೆಸ್‌ ರಸ್ತೆ ಎಂಬುದಕ್ಕೆ ದಾಖಲೆಗಳಿಲ್ಲ ಎಂದ ಆಯುಕ್ತರು: ದಾಖಲೆಗಳನ್ಮೊಮ್ಮೆ ಸರಿಯಾಗಿ ಪರಿಶೀಲಿಸಬೇಕೆಂದು ಸಂಸದ ಯದುವೀರ್‌ ಟಾಂಗ್‌

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಈ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಟಾಂಗ್‌ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಆರ್‌ಎಸ್‌ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಬಗ್ಗೆ ಉಲ್ಲೇಖಗಳಿಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ ಈ ದಾಖಲೆಗಳನ್ನೊಮ್ಮೆ ನೋಡಿ. ಮೈಸೂರು ಸಂಸ್ಥಾನದ ದಿವಾನರಾದ ಮಿರ್ಜಾ ಇಸ್ಮಾಯಿಲ್ ಅವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆ ಎಂದು ಕರೆಯಲ್ಪಡುವ ಸ್ಥಳದಲ್ಲಿ ವಾಸಿಸುತ್ತಿದ್ದರು. ಈ ವಿಳಾಸದಿಂದ ಕಳುಹಿಸಲಾದ ಪತ್ರಗಳು ಸಹ ಪ್ರಿನ್ಸೆಸ್‌ ರಸ್ತೆಯ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದು ತಿಳಿಸಿದ್ದಾರೆ.

ಭಾರತ ಸರ್ಕಾರದ ಸರ್ವೆ ಮತ್ತು ಮ್ಯಾಪಿಂಗ್ ಹೊಂದಿರುವ ಸರ್ಕಾರಿ ಇಲಾಖೆಯವರು ಅಧಿಕೃತವಾಗಿ ಪ್ರಕಟಿಸಿರುವ ಮೈಸೂರು ಪ್ರವಾಸದ ನಕ್ಷೆ/ಮಾರ್ಗದರ್ಶಿಯಲ್ಲಿರುವ ಮೈಸೂರಿನ ನಕ್ಷೆಯಲ್ಲಿಯೂ ಸಹ ಪ್ರಿನ್ಸೆಸ್‌ ರಸ್ತೆ ಎಂದು ಸ್ಪಷ್ಟವಾಗಿ ಗುರುತಿಸಿ ಹೆಸರುಸಲಾಗಿದೆ. ಇನ್ನೂ ಅಧಿಕೃತವಾಗಿ ಮೈಸೂರು ನಗರಾಭಿವೃದ್ಧಿ ಟ್ರಸ್ಟ್ ಬೋರ್ಡ್ ಈ ರಸ್ತೆಯನ್ನು ಔಪಚಾರಿಕವಾಗಿ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ 1921ರ ದಾಖಲೆಗಳು ದೃಢಪಡಿಸುತ್ತವೆ. ಹೀಗಾಗಿ ಈ ಮೇಲಿನ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದರೆ, ಯೋಗ್ಯವಾದ ಗಮನಾರ್ಹ ಪುರಾವೆಗಳನ್ನು ಒದಗಿಸುತ್ತವೆ ಎಂದು ತಿರುಗೇಟು ನೀಡಿದ್ದಾರೆ.

ಈ ರಸ್ತೆಗೆ ಮರುನಾಮಕರಣವನ್ನು ಪ್ರಸ್ತಾಪಿಸುವ ಮೂಲಕ ಅನಗತ್ಯ ಗೊಂದಲವನ್ನು ಸೃಷ್ಟಿಸುವ ಬದಲು, ರಸ್ತೆಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒಪ್ಪಿಕೊಳ್ಳುವುದು ಅತ್ಯಗತ್ಯ. ಅದರ ಮೂಲಗಳನ್ನು ಪರಿಶೀಲಿಸಿ, ಅಂದಿನ ರಾಜಮನೆತನ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಗೌರವಿಸಬೇಕು. ಅವರ ಪರಂಪರೆಯನ್ನು ಕಾಲ ಕಾಲಕ್ಕೂ ಶಾಶ್ವತವಾಗಿ ಸಂರಕ್ಷಿಸಿರುವುದನ್ನು ಮತ್ತು ಮುಂದಿನ ಪೀಳಿಗೆಗೆ ಈ ಪರಂಪರೆಯನ್ನು ಪರಿಚಯಿಸುವುದು ಪಾಲಿಕೆ ಹಾಗೂ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago