ಮೈಸೂರು ನಗರ

ಮೈಸೂರು: ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ಎಂಟು ರೈಲುಗಳ ಸೇವೆ ವಿಸ್ತಾರ-ಸಂಸದ ಯದುವೀರ್‌

ಮೈಸೂರು: ಶೀಘ್ರದಲ್ಲೇ ನಗರದ ಅಶೋಕಪುರಂ ರೈಲ್ವೆ ನಿಲ್ದಾಣದವರೆಗೂ ಎಂಟು ರೈಲುಗಳ ಸೇವೆ ವಿಸ್ತಾರಗೊಳ್ಳಲಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶೀಘ್ರದಲ್ಲಿ ಇಲ್ಲಿನ ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ಎಂಟು ರೈಲುಗಳ ಸೇವೆ ವಿಸ್ತಾರಗೊಳ್ಳಲಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದಿದ್ದಾರೆ.

ಟ್ರ್ಯಾಕ್ 1 ರಿಂದ 5ರವರೆಗೆ ಸಂಪೂರ್ಣ ವಿದ್ಯುದಿಕರಣಗೊಳಿಸಿˌ ಅಶೋಕಪುರಂ ಯಾರ್ಡ್’ನ ಮೂಲಕ ರೈಲು ಸೇವೆ ಕಾರ್ಯಾರಂಭಗೊಂಡು ಜನತೆಗೆ ಅನುಕೂಲವಾಗುವಂತೆ ಮಾಡಿದ ನೈಋತ್ಯ ರೈಲ್ವೆ ಇಲಾಖೆಯ ಪರಿಶ್ರಮ ಹಾಗೂ ಅವರ ಕಾರ್ಯಕ್ಷಮತೆ ಪ್ರಶಂಸನೀಯವಾಗಿದೆ ಇದಕ್ಕಾಗಿ ನಾನು ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರದ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ಭಾರತೀಯ ರೈಲು ಸೇವೆ ಸಂಪೂರ್ಣವಾಗಿ ಪರಿವರ್ತನೆಗೊಂಡಿದೆ ಎಂಬುದಕ್ಕೆ ಈ ಪ್ರಯತ್ನ ಸಾಕ್ಷಿಯಾಗಿದೆ. ಅಶೋಕಪುರಂವರೆಗಿನ ರೈಲು ಸೇವೆಗಳ ವಿಸ್ತರಣೆಯು ಮೈಸೂರು ಮತ್ತು ಹತ್ತಿರದ ಪ್ರದೇಶದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ನೈಋತ್ಯ ರೈಲ್ವೆಯು ಸಂಪರ್ಕ ಮತ್ತು ಮೂಲ ಸೌಕರ್ಯವನ್ನು ಸುಧಾರಿಸುವಲ್ಲಿ ದಾಪುಗಾಲು ಹಾಕುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಶೋಕಪುರಂ ರೈಲು ನಿಲ್ದಾಣದವರೆಗೆ ವಿಸ್ತಾರವಾಗಿರುವ ರೈಲು ಸೇವೆಗಳು ಹಾಗೂ ಅಶೋಕಪುರಂನಿಂದ ಪ್ರಾರಂಭವಾಗುವ ರೈಲು ಸೇವೆಗಳ ಪಟ್ಟಿ ಇಂತಿವೆ.

1.MAS-MYS-MAS ಕಾವೇರಿ ಎಕ್ಸ್‌ಪ್ರೆಸ್(16021/22)
2. MAS-MYS-MAS ಎಕ್ಸ್‌ಪ್ರೆಸ್‌(12609/10)
3. SBC-MYS-SBC ಮಾಲ್ಗುಡಿ ಎಕ್ಸ್‌ಪ್ರೆಸ್‌(20624/23)
4. KCG-MYS-KCG ಎಕ್ಸ್‌ಪ್ರೆಸ್‌(12785/86)
5. SBC-MYS-SBC ಮೆಮು(06525/26)
6. SBC-MYS-SBC ಮೆಮು(06559/60)
7. SBC-MYS-SBC ಮೆಮು(06255/56)
8. SBC-MYS ಮೆಮು(06257/58)

 

ಅರ್ಚನ ಎಸ್‌ ಎಸ್

Recent Posts

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

15 mins ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

2 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

2 hours ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

2 hours ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

5 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

5 hours ago