ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಕೂಡ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿದ್ದರು.
ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್ ಒಡೆಯರ್, ಡೆಂಗ್ಯೂ ಪ್ರಕರಣ ಕುರಿತಂತೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯ ಪ್ರತಿ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ಕೂಡ ನಡೆಸಿ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧ ಪಟ್ಟಂತೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು.
ಇನ್ನು ಇದೇ ವೇಳೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ. ನಮ್ಮ ವೈದ್ಯರು ಕೂಡ ಉತ್ತಮ ರೀತಿಯಲ್ಲಿ ಚಿಕಿತ್ಸೆ ಕೊಡುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡೆಂಗ್ಯೂ ನಿಯಂತ್ರಣ ಹಾಗೂ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ ಮಾಡಬೇಕು ಅಂದುಕೊಂಡಿದ್ದೇವೆ. ಈ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಲಕರಣೆಯ ಕೊರತೆ ಇದ್ದು ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭ ಸಂಸದ ಯದುವೀರ್ ಗೆಮಾಜಿ ಶಾಸಕ ಎಲ್ ನಾಗೇಂದ್ರ, ಡಿಎಚ್ ಓ ಡಾ.ಕುಮಾರಸ್ವಾಮಿ ಸಾಥ್ ಕೊಟ್ಟಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…