ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಕೂಡ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿದ್ದರು.
ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್ ಒಡೆಯರ್, ಡೆಂಗ್ಯೂ ಪ್ರಕರಣ ಕುರಿತಂತೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯ ಪ್ರತಿ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ಕೂಡ ನಡೆಸಿ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧ ಪಟ್ಟಂತೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು.
ಇನ್ನು ಇದೇ ವೇಳೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ. ನಮ್ಮ ವೈದ್ಯರು ಕೂಡ ಉತ್ತಮ ರೀತಿಯಲ್ಲಿ ಚಿಕಿತ್ಸೆ ಕೊಡುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡೆಂಗ್ಯೂ ನಿಯಂತ್ರಣ ಹಾಗೂ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ ಮಾಡಬೇಕು ಅಂದುಕೊಂಡಿದ್ದೇವೆ. ಈ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಲಕರಣೆಯ ಕೊರತೆ ಇದ್ದು ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭ ಸಂಸದ ಯದುವೀರ್ ಗೆಮಾಜಿ ಶಾಸಕ ಎಲ್ ನಾಗೇಂದ್ರ, ಡಿಎಚ್ ಓ ಡಾ.ಕುಮಾರಸ್ವಾಮಿ ಸಾಥ್ ಕೊಟ್ಟಿದ್ದಾರೆ.
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…