ಮೈಸೂರು ನಗರ

ವಿವಿಧ ಗ್ರಾಮಗಳಿಗೆ ತೆರಳಿ, ಜನರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಿದ ಸಂಸದ ಯದುವೀರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಜನರಿಂದ ಕುಂದು ಕೊರತೆಗಳ ಅಹವಾಲುಅನ್ನು ಸ್ವೀಕರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ಮೈಸೂರಿನ ಹಂಚ್ಯಾ ಗ್ರಾಮ, ರಮ್ಮನಹಳ್ಳಿ ಗ್ರಾಮ, ಕಾಮನಕೆರೆ ಹಾಗೂ ಹಳೆ ಕೆಸರೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಭೇಟಿ ನೀಡಿದ ಗ್ರಾಮದ ಸಾರ್ವಜನಿಕರೊಂದಿಗೆ ಸಭೆ ನಡೆಸಿˌ ಅವರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. ಇದೇ ವೇಳೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಗ್ರಾಮಗಳ ಅಭಿವೃದ್ದಿಗೆ ಕೈಗೊಳ್ಳಲಾಗಿರುವ ಕಾರ್ಯಗಳ ಕುರಿತು ಗ್ರಾಮಸ್ಥರಿಗೆ ವಿವರಿಸಲಾಯಿತು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಕವೀಶ್ ಗೌಡ, ಪ್ರಧಾನ ಕಾರ್ಯದರ್ಶಿ ಬಿ. ಎಂ. ರಘು ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಅರ್ಚನ ಎಸ್‌ ಎಸ್

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago