ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.
ಈ ಸಂತೋಷದ ವಿಷಯವನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು NH-275ರ ಬೆಂಗಳೂರು-ಮೈಸೂರು ವಿಭಾಗದಲ್ಲಿ ವರ್ಧಿತ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಕಾಮಗಾರಿಗಳಿಗಾಗಿ ಸಲ್ಲಿಸಿದ ಪ್ರಸ್ತಾವನೆಗಳನ್ನು ಅನುಮೋದಿಸಿದ್ದಾರೆ.
ಜಂಕ್ಷನ್ ಅಭಿವೃದ್ಧಿ: ಮೈಸೂರು ರಿಂಗ್ ರಸ್ತೆ ಮತ್ತು ಬೆಂಗಳೂರು-ಮೈಸೂರು ಹೆದ್ದಾರಿ ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಣಿಪಾಲ್ ಆಸ್ಪತ್ರೆ ಜಂಕ್ಷನ್ನಲ್ಲಿ ಮೇಲ್ಸೇತುವೆ ನಿರ್ಮಾಣ.
ವರ್ಧಿತ ಸಂಚಾರ ನಿಯಂತ್ರಣ: ಟೋಲ್ ಬೂತ್ಗಳೊಂದಿಗೆ ಪ್ರಮಾಣಿತ ಪ್ರವೇಶ ಹಾಗೂ ನಿರ್ಗಮನ ನಿಬಂಧನೆಗಳ ಸ್ಥಾಪನೆ, ವಿವಿಧ ಸ್ಥಳಗಳಿಗೆ ತಡೆರಹಿತ ಸಂಚಾರ ಚಲನೆಯನ್ನು ಖಚಿತಪಡಿಸುವುದು ಮತ್ತು ಸ್ಥಳೀಯ ಚಲನಶೀಲತೆ ಮತ್ತು ಸಂಪರ್ಕವನ್ನು ಸುಧಾರಿಸಲು ಸೇವಾ ರಸ್ತೆಗಳ ನಿರ್ಮಾಣಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಅನುಮೋದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಒಡೆಯರ್ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…