ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.
ಈ ಸಂತೋಷದ ವಿಷಯವನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು NH-275ರ ಬೆಂಗಳೂರು-ಮೈಸೂರು ವಿಭಾಗದಲ್ಲಿ ವರ್ಧಿತ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಕಾಮಗಾರಿಗಳಿಗಾಗಿ ಸಲ್ಲಿಸಿದ ಪ್ರಸ್ತಾವನೆಗಳನ್ನು ಅನುಮೋದಿಸಿದ್ದಾರೆ.
ಜಂಕ್ಷನ್ ಅಭಿವೃದ್ಧಿ: ಮೈಸೂರು ರಿಂಗ್ ರಸ್ತೆ ಮತ್ತು ಬೆಂಗಳೂರು-ಮೈಸೂರು ಹೆದ್ದಾರಿ ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಣಿಪಾಲ್ ಆಸ್ಪತ್ರೆ ಜಂಕ್ಷನ್ನಲ್ಲಿ ಮೇಲ್ಸೇತುವೆ ನಿರ್ಮಾಣ.
ವರ್ಧಿತ ಸಂಚಾರ ನಿಯಂತ್ರಣ: ಟೋಲ್ ಬೂತ್ಗಳೊಂದಿಗೆ ಪ್ರಮಾಣಿತ ಪ್ರವೇಶ ಹಾಗೂ ನಿರ್ಗಮನ ನಿಬಂಧನೆಗಳ ಸ್ಥಾಪನೆ, ವಿವಿಧ ಸ್ಥಳಗಳಿಗೆ ತಡೆರಹಿತ ಸಂಚಾರ ಚಲನೆಯನ್ನು ಖಚಿತಪಡಿಸುವುದು ಮತ್ತು ಸ್ಥಳೀಯ ಚಲನಶೀಲತೆ ಮತ್ತು ಸಂಪರ್ಕವನ್ನು ಸುಧಾರಿಸಲು ಸೇವಾ ರಸ್ತೆಗಳ ನಿರ್ಮಾಣಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಅನುಮೋದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಒಡೆಯರ್ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…