ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.
ಕಳೆದ ಕೆಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣಕ್ಕೆ ಭೂಮಿ ಮಂಜೂರಾತಿ ಪ್ರಕ್ರಿಯೆಗೆ ಮರು ಚಾಲನೆ ನೀಡಿದ ಸಂಸದ ಯದುವೀರ್ ಒಡೆಯರ್ ಅವರ ಸತತ ಪ್ರಯತ್ನದಿಂದ ಈಗ ಮೈಸೂರಿನ ಇಲವಾಲ ಹೋಬಳಿಯ ಹುಯಿಲಾಳು ಗ್ರಾಮದಲ್ಲಿ ಅಗತ್ಯ ಜಮೀನು ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮೈಸೂರಿನ ಸಂಸದರಾಗಿ ಆಯ್ಕೆಯಾದ ಯದುವೀರ್ ಒಡೆಯರ್ ನಿರಂತರವಾಗಿ ಈ ವಿಷಯದ ಕುರಿತು ಪ್ರಯತ್ನ ಹೂಡಿದರು. ಇದು ಈಗ ಯಶಸ್ವಿಯಾಗಿದೆ.
ಈ ವಿಷಯದ ಕುರಿತು ಸಂಸದ ಯದುವೀರ್ ಒಡೆಯರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ವೀಕ್ಷಿಸಬೇಕು ಎಂಬ ಮೈಸೂರಿಗರ ಕನಸು ನನಸು ಮಾಡಬೇಕೆಂಬ ತುಡಿತವಿತ್ತು. ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರಿಕೆಟ್ ಮೈದಾನ ನಿರ್ಮಿಸಬೇಕು ಎಂಬ ಪ್ರಕ್ರಿಯೆ ಕಳೆದ ಕೆಲ ವರ್ಷದಿಂದ ಸ್ಥಗಿತಗೊಂಡಿತ್ತು. ಇದಕ್ಕೆ ಮರು ಚಾಲನೆ ನೀಡಲು ನಿರ್ಧರಿಸಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ನಿರಂತರ ಮನವಿ ಸಲ್ಲಿಸಲಾಯಿತು. ಚಾಮರಾಜನಗರದಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯ ಜಮೀನು ನೀಡಲು ನಿರ್ಧರಿಸಲಾಗಿದೆ. ಇದು ಮೈಸೂರಿಗೆ ಅತ್ಯಂತ ಖುಷಿ ನೀಡುವ ವಿಚಾರವಾಗಿದೆ ಎಂದು ಸಂಸದರು ಹೇಳಿದ್ದಾರೆ.
ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಬೇಕೆಂಬ ಪ್ರಕ್ರಿಯೆಯಲ್ಲಿ ಜಮೀನು ಮಂಜೂರಾತಿಯ ಮೊದಲ ಹಂತ ಪೂರ್ಣಗೊಂಡಿದೆ. ಭೂ ಸ್ವಾಧೀನ ಹಾಗೂ ಇನ್ನಿತರ ಕಾರ್ಯಗಳು ತ್ವರಿತ ಗತಿಯಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿಗರ ಕನಸು ಈಡೇರಿಸಬೇಕೆಂಬದೇ ನಮ್ಮ ಮುಖ್ಯ ಗುರಿ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ. ಸಾಂಸ್ಕೃತಿಕ ರಾಜಧಾನಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಿ ಶ್ರಮಿಸೋಣ ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…