ಮೈಸೂರು ನಗರ

ಮೈಸೂರಿನ ಕ್ರಿಕೆಟ್‌ ಪ್ರೇಮಿಗಳ ಆಶಯ ಸಾಕಾರಗೊಳಿಸಿದ ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್‌ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌.

ಕಳೆದ ಕೆಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣಕ್ಕೆ ಭೂಮಿ ಮಂಜೂರಾತಿ ಪ್ರಕ್ರಿಯೆಗೆ ಮರು ಚಾಲನೆ ನೀಡಿದ ಸಂಸದ ಯದುವೀರ್‌ ಒಡೆಯರ್‌ ಅವರ ಸತತ ಪ್ರಯತ್ನದಿಂದ ಈಗ ಮೈಸೂರಿನ ಇಲವಾಲ ಹೋಬಳಿಯ ಹುಯಿಲಾಳು ಗ್ರಾಮದಲ್ಲಿ ಅಗತ್ಯ ಜಮೀನು ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೈಸೂರಿನ ಸಂಸದರಾಗಿ ಆಯ್ಕೆಯಾದ ಯದುವೀರ್‌ ಒಡೆಯರ್‌ ನಿರಂತರವಾಗಿ ಈ ವಿಷಯದ ಕುರಿತು ಪ್ರಯತ್ನ ಹೂಡಿದರು. ಇದು ಈಗ ಯಶಸ್ವಿಯಾಗಿದೆ.

ಈ ವಿಷಯದ ಕುರಿತು ಸಂಸದ ಯದುವೀರ್‌ ಒಡೆಯರ್‌ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯ ವೀಕ್ಷಿಸಬೇಕು ಎಂಬ ಮೈಸೂರಿಗರ ಕನಸು ನನಸು ಮಾಡಬೇಕೆಂಬ ತುಡಿತವಿತ್ತು. ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಕ್ರಿಕೆಟ್‌ ಮೈದಾನ ನಿರ್ಮಿಸಬೇಕು ಎಂಬ ಪ್ರಕ್ರಿಯೆ ಕಳೆದ ಕೆಲ ವರ್ಷದಿಂದ ಸ್ಥಗಿತಗೊಂಡಿತ್ತು. ಇದಕ್ಕೆ ಮರು ಚಾಲನೆ ನೀಡಲು ನಿರ್ಧರಿಸಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್‌ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ನಿರಂತರ ಮನವಿ ಸಲ್ಲಿಸಲಾಯಿತು. ಚಾಮರಾಜನಗರದಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯ ಜಮೀನು ನೀಡಲು ನಿರ್ಧರಿಸಲಾಗಿದೆ. ಇದು ಮೈಸೂರಿಗೆ ಅತ್ಯಂತ ಖುಷಿ ನೀಡುವ ವಿಚಾರವಾಗಿದೆ ಎಂದು ಸಂಸದರು ಹೇಳಿದ್ದಾರೆ.

ಮೈಸೂರಿನಲ್ಲಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣವಾಗಬೇಕೆಂಬ ಪ್ರಕ್ರಿಯೆಯಲ್ಲಿ ಜಮೀನು ಮಂಜೂರಾತಿಯ ಮೊದಲ ಹಂತ ಪೂರ್ಣಗೊಂಡಿದೆ. ಭೂ ಸ್ವಾಧೀನ ಹಾಗೂ ಇನ್ನಿತರ ಕಾರ್ಯಗಳು ತ್ವರಿತ ಗತಿಯಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಮೈಸೂರಿಗರ ಕನಸು ಈಡೇರಿಸಬೇಕೆಂಬದೇ ನಮ್ಮ ಮುಖ್ಯ ಗುರಿ. ಈ ನಿಟ್ಟಿನಲ್ಲಿ ಎಲ್ಲ‌ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ. ಸಾಂಸ್ಕೃತಿಕ ರಾಜಧಾನಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಿ ಶ್ರಮಿಸೋಣ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

7 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

9 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

12 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

12 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

15 hours ago