ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.
ಕಳೆದ ಕೆಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣಕ್ಕೆ ಭೂಮಿ ಮಂಜೂರಾತಿ ಪ್ರಕ್ರಿಯೆಗೆ ಮರು ಚಾಲನೆ ನೀಡಿದ ಸಂಸದ ಯದುವೀರ್ ಒಡೆಯರ್ ಅವರ ಸತತ ಪ್ರಯತ್ನದಿಂದ ಈಗ ಮೈಸೂರಿನ ಇಲವಾಲ ಹೋಬಳಿಯ ಹುಯಿಲಾಳು ಗ್ರಾಮದಲ್ಲಿ ಅಗತ್ಯ ಜಮೀನು ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮೈಸೂರಿನ ಸಂಸದರಾಗಿ ಆಯ್ಕೆಯಾದ ಯದುವೀರ್ ಒಡೆಯರ್ ನಿರಂತರವಾಗಿ ಈ ವಿಷಯದ ಕುರಿತು ಪ್ರಯತ್ನ ಹೂಡಿದರು. ಇದು ಈಗ ಯಶಸ್ವಿಯಾಗಿದೆ.
ಈ ವಿಷಯದ ಕುರಿತು ಸಂಸದ ಯದುವೀರ್ ಒಡೆಯರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ವೀಕ್ಷಿಸಬೇಕು ಎಂಬ ಮೈಸೂರಿಗರ ಕನಸು ನನಸು ಮಾಡಬೇಕೆಂಬ ತುಡಿತವಿತ್ತು. ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರಿಕೆಟ್ ಮೈದಾನ ನಿರ್ಮಿಸಬೇಕು ಎಂಬ ಪ್ರಕ್ರಿಯೆ ಕಳೆದ ಕೆಲ ವರ್ಷದಿಂದ ಸ್ಥಗಿತಗೊಂಡಿತ್ತು. ಇದಕ್ಕೆ ಮರು ಚಾಲನೆ ನೀಡಲು ನಿರ್ಧರಿಸಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ನಿರಂತರ ಮನವಿ ಸಲ್ಲಿಸಲಾಯಿತು. ಚಾಮರಾಜನಗರದಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯ ಜಮೀನು ನೀಡಲು ನಿರ್ಧರಿಸಲಾಗಿದೆ. ಇದು ಮೈಸೂರಿಗೆ ಅತ್ಯಂತ ಖುಷಿ ನೀಡುವ ವಿಚಾರವಾಗಿದೆ ಎಂದು ಸಂಸದರು ಹೇಳಿದ್ದಾರೆ.
ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಬೇಕೆಂಬ ಪ್ರಕ್ರಿಯೆಯಲ್ಲಿ ಜಮೀನು ಮಂಜೂರಾತಿಯ ಮೊದಲ ಹಂತ ಪೂರ್ಣಗೊಂಡಿದೆ. ಭೂ ಸ್ವಾಧೀನ ಹಾಗೂ ಇನ್ನಿತರ ಕಾರ್ಯಗಳು ತ್ವರಿತ ಗತಿಯಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿಗರ ಕನಸು ಈಡೇರಿಸಬೇಕೆಂಬದೇ ನಮ್ಮ ಮುಖ್ಯ ಗುರಿ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ. ಸಾಂಸ್ಕೃತಿಕ ರಾಜಧಾನಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಿ ಶ್ರಮಿಸೋಣ ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…