ಮೈಸೂರು: ಜೂನ್ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜೂನ್ 2027 ರೊಳಗೆ ಪೂರ್ಣಗೊಳ್ಳಲು ನಿರ್ಧರಿಸಲಾಗಿರುವ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಯು ಇದೀಗ ಸ್ಥಿರ ಪ್ರಗತಿಯಲ್ಲಿದೆ. ಈ ಹೆದ್ದಾರಿಯೂ 92.3 ಕಿ.ಮೀ.ಗಳಷ್ಟು ವಿಸ್ತಾರವಾದ ಈ ನಾಲ್ಕು ಪಥದ ಪ್ರವೇಶ-ನಿಯಂತ್ರಿತ ಹೆದ್ದಾರಿಯಾಗಿದೆ. ಅಲ್ಲದೇ ಮೈಸೂರು ಮತ್ತು ಕುಶಾಲನಗರದ ಪ್ರಯಾಣದ ಸಮಯವನ್ನು ಕನಿಷ್ಠ 1-1.5 ಗಂಟೆಗಳಿಗೆ ಕಡಿತಗೊಳಿಸಲಿದೆ. ಇನ್ನೂ ಬೆಂಗಳೂರಿನಿಂದ ಕುಶಾಲನಗರದವರೆಗೆ ಪ್ರಯಾಣಿಸಲು ಕೇವಲ 3-3.5ಗಂಟೆಗಳ ಸಮಯ ತಗಲುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಜೂರು ಮಾಡಿದ 4,129 ಕೋಟಿ ರೂ. ಬಜೆಟ್ನೊಂದಿಗೆ ಈ ಯೋಜನೆಯು ಈಗಾಗಲೇ ಗಣನೀಯವಾದ ಪ್ರಗತಿ ಕಾಣುತ್ತಿದೆ. ಇದರಲ್ಲಿ ಹೆಚ್ಚಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರಣ್ಯ ಪ್ರದೇಶದ ತೆರುವಿಗೆ ಅನುಮತಿಯೂ ಸಹ ದೊರೆತಿದೆ ಎಂದು ಹೇಳಿದ್ದಾರೆ.
ಈ ಬಹುನಿರೀಕ್ಷಿತ ಯೋಜನೆಯು ಪೂರ್ಣಗೊಂಡ ನಂತರ ಮೈಸೂರು ಮತ್ತು ಕೊಡಗಿನಲ್ಲಿ ಹೆದ್ದಾರಿ ಸಂಪರ್ಕ ಸುಧಾರಣೆಗೊಳ್ಳುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ವೇಗ ನೀಡುತ್ತದೆ. ಅಲ್ಲದೇ ವ್ಯಾಪಾರ ಮತ್ತು ಹೂಡಿಕೆಗಳನ್ನು ಆಕರ್ಷಿಸಲುˌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಸ್ಥಳೀಯ ವ್ಯವಹಾರಗಳಿಗೆ ಅವಕಾಶಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯಿಂದಾಗಿ ನಮ್ಮ ಪ್ರದೇಶಕ್ಕೆ ಗರಿಷ್ಠ ಮಟ್ಟದ ಪ್ರಯೋಜನಗಳು ದೊರೆಯಲಿವೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಪ್ರತಿನಿಧಿಯಾಗಿ ಕ್ಷೇತ್ರದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ದಿಗೆ ಬದ್ಧನಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…