ಮೈಸೂರು ನಗರ

ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ| ಜೂನ್‌ 2027ರೊಳಗೆ ಪೂರ್ಣಗೊಳ್ಳಲಿದೆ: ಸಂಸದ ಯದುವೀರ್‌

ಮೈಸೂರು: ಜೂನ್‌ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜೂನ್ 2027 ರೊಳಗೆ ಪೂರ್ಣಗೊಳ್ಳಲು ನಿರ್ಧರಿಸಲಾಗಿರುವ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಯು ಇದೀಗ ಸ್ಥಿರ ಪ್ರಗತಿಯಲ್ಲಿದೆ. ಈ ಹೆದ್ದಾರಿಯೂ 92.3 ಕಿ.ಮೀ.ಗಳಷ್ಟು ವಿಸ್ತಾರವಾದ ಈ ನಾಲ್ಕು ಪಥದ ಪ್ರವೇಶ-ನಿಯಂತ್ರಿತ ಹೆದ್ದಾರಿಯಾಗಿದೆ. ಅಲ್ಲದೇ ಮೈಸೂರು ಮತ್ತು ಕುಶಾಲನಗರದ ಪ್ರಯಾಣದ ಸಮಯವನ್ನು ಕನಿಷ್ಠ 1-1.5 ಗಂಟೆಗಳಿಗೆ ಕಡಿತಗೊಳಿಸಲಿದೆ. ಇನ್ನೂ ಬೆಂಗಳೂರಿನಿಂದ ಕುಶಾಲನಗರದವರೆಗೆ ಪ್ರಯಾಣಿಸಲು ಕೇವಲ 3-3.5ಗಂಟೆಗಳ ಸಮಯ ತಗಲುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಜೂರು ಮಾಡಿದ 4,129 ಕೋಟಿ ರೂ. ಬಜೆಟ್‌ನೊಂದಿಗೆ ಈ ಯೋಜನೆಯು ಈಗಾಗಲೇ ಗಣನೀಯವಾದ ಪ್ರಗತಿ ಕಾಣುತ್ತಿದೆ. ಇದರಲ್ಲಿ ಹೆಚ್ಚಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರಣ್ಯ ಪ್ರದೇಶದ ತೆರುವಿಗೆ ಅನುಮತಿಯೂ ಸಹ ದೊರೆತಿದೆ ಎಂದು ಹೇಳಿದ್ದಾರೆ.

ಈ ಬಹುನಿರೀಕ್ಷಿತ ಯೋಜನೆಯು ಪೂರ್ಣಗೊಂಡ ನಂತರ ಮೈಸೂರು ಮತ್ತು ಕೊಡಗಿನಲ್ಲಿ ಹೆದ್ದಾರಿ ಸಂಪರ್ಕ ಸುಧಾರಣೆಗೊಳ್ಳುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ವೇಗ ನೀಡುತ್ತದೆ. ಅಲ್ಲದೇ ವ್ಯಾಪಾರ ಮತ್ತು ಹೂಡಿಕೆಗಳನ್ನು ಆಕರ್ಷಿಸಲುˌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಸ್ಥಳೀಯ ವ್ಯವಹಾರಗಳಿಗೆ ಅವಕಾಶಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯಿಂದಾಗಿ ನಮ್ಮ ಪ್ರದೇಶಕ್ಕೆ ಗರಿಷ್ಠ ಮಟ್ಟದ ಪ್ರಯೋಜನಗಳು ದೊರೆಯಲಿವೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಪ್ರತಿನಿಧಿಯಾಗಿ ಕ್ಷೇತ್ರದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ದಿಗೆ ಬದ್ಧನಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

31 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

57 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

1 hour ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago