ಮೈಸೂರು: ಜೂನ್ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜೂನ್ 2027 ರೊಳಗೆ ಪೂರ್ಣಗೊಳ್ಳಲು ನಿರ್ಧರಿಸಲಾಗಿರುವ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಯು ಇದೀಗ ಸ್ಥಿರ ಪ್ರಗತಿಯಲ್ಲಿದೆ. ಈ ಹೆದ್ದಾರಿಯೂ 92.3 ಕಿ.ಮೀ.ಗಳಷ್ಟು ವಿಸ್ತಾರವಾದ ಈ ನಾಲ್ಕು ಪಥದ ಪ್ರವೇಶ-ನಿಯಂತ್ರಿತ ಹೆದ್ದಾರಿಯಾಗಿದೆ. ಅಲ್ಲದೇ ಮೈಸೂರು ಮತ್ತು ಕುಶಾಲನಗರದ ಪ್ರಯಾಣದ ಸಮಯವನ್ನು ಕನಿಷ್ಠ 1-1.5 ಗಂಟೆಗಳಿಗೆ ಕಡಿತಗೊಳಿಸಲಿದೆ. ಇನ್ನೂ ಬೆಂಗಳೂರಿನಿಂದ ಕುಶಾಲನಗರದವರೆಗೆ ಪ್ರಯಾಣಿಸಲು ಕೇವಲ 3-3.5ಗಂಟೆಗಳ ಸಮಯ ತಗಲುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಜೂರು ಮಾಡಿದ 4,129 ಕೋಟಿ ರೂ. ಬಜೆಟ್ನೊಂದಿಗೆ ಈ ಯೋಜನೆಯು ಈಗಾಗಲೇ ಗಣನೀಯವಾದ ಪ್ರಗತಿ ಕಾಣುತ್ತಿದೆ. ಇದರಲ್ಲಿ ಹೆಚ್ಚಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರಣ್ಯ ಪ್ರದೇಶದ ತೆರುವಿಗೆ ಅನುಮತಿಯೂ ಸಹ ದೊರೆತಿದೆ ಎಂದು ಹೇಳಿದ್ದಾರೆ.
ಈ ಬಹುನಿರೀಕ್ಷಿತ ಯೋಜನೆಯು ಪೂರ್ಣಗೊಂಡ ನಂತರ ಮೈಸೂರು ಮತ್ತು ಕೊಡಗಿನಲ್ಲಿ ಹೆದ್ದಾರಿ ಸಂಪರ್ಕ ಸುಧಾರಣೆಗೊಳ್ಳುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ವೇಗ ನೀಡುತ್ತದೆ. ಅಲ್ಲದೇ ವ್ಯಾಪಾರ ಮತ್ತು ಹೂಡಿಕೆಗಳನ್ನು ಆಕರ್ಷಿಸಲುˌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಸ್ಥಳೀಯ ವ್ಯವಹಾರಗಳಿಗೆ ಅವಕಾಶಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯಿಂದಾಗಿ ನಮ್ಮ ಪ್ರದೇಶಕ್ಕೆ ಗರಿಷ್ಠ ಮಟ್ಟದ ಪ್ರಯೋಜನಗಳು ದೊರೆಯಲಿವೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಪ್ರತಿನಿಧಿಯಾಗಿ ಕ್ಷೇತ್ರದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ದಿಗೆ ಬದ್ಧನಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…