ಮೈಸೂರು ನಗರ

ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ| ಜೂನ್‌ 2027ರೊಳಗೆ ಪೂರ್ಣಗೊಳ್ಳಲಿದೆ: ಸಂಸದ ಯದುವೀರ್‌

ಮೈಸೂರು: ಜೂನ್‌ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜೂನ್ 2027 ರೊಳಗೆ ಪೂರ್ಣಗೊಳ್ಳಲು ನಿರ್ಧರಿಸಲಾಗಿರುವ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಯು ಇದೀಗ ಸ್ಥಿರ ಪ್ರಗತಿಯಲ್ಲಿದೆ. ಈ ಹೆದ್ದಾರಿಯೂ 92.3 ಕಿ.ಮೀ.ಗಳಷ್ಟು ವಿಸ್ತಾರವಾದ ಈ ನಾಲ್ಕು ಪಥದ ಪ್ರವೇಶ-ನಿಯಂತ್ರಿತ ಹೆದ್ದಾರಿಯಾಗಿದೆ. ಅಲ್ಲದೇ ಮೈಸೂರು ಮತ್ತು ಕುಶಾಲನಗರದ ಪ್ರಯಾಣದ ಸಮಯವನ್ನು ಕನಿಷ್ಠ 1-1.5 ಗಂಟೆಗಳಿಗೆ ಕಡಿತಗೊಳಿಸಲಿದೆ. ಇನ್ನೂ ಬೆಂಗಳೂರಿನಿಂದ ಕುಶಾಲನಗರದವರೆಗೆ ಪ್ರಯಾಣಿಸಲು ಕೇವಲ 3-3.5ಗಂಟೆಗಳ ಸಮಯ ತಗಲುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಜೂರು ಮಾಡಿದ 4,129 ಕೋಟಿ ರೂ. ಬಜೆಟ್‌ನೊಂದಿಗೆ ಈ ಯೋಜನೆಯು ಈಗಾಗಲೇ ಗಣನೀಯವಾದ ಪ್ರಗತಿ ಕಾಣುತ್ತಿದೆ. ಇದರಲ್ಲಿ ಹೆಚ್ಚಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರಣ್ಯ ಪ್ರದೇಶದ ತೆರುವಿಗೆ ಅನುಮತಿಯೂ ಸಹ ದೊರೆತಿದೆ ಎಂದು ಹೇಳಿದ್ದಾರೆ.

ಈ ಬಹುನಿರೀಕ್ಷಿತ ಯೋಜನೆಯು ಪೂರ್ಣಗೊಂಡ ನಂತರ ಮೈಸೂರು ಮತ್ತು ಕೊಡಗಿನಲ್ಲಿ ಹೆದ್ದಾರಿ ಸಂಪರ್ಕ ಸುಧಾರಣೆಗೊಳ್ಳುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ವೇಗ ನೀಡುತ್ತದೆ. ಅಲ್ಲದೇ ವ್ಯಾಪಾರ ಮತ್ತು ಹೂಡಿಕೆಗಳನ್ನು ಆಕರ್ಷಿಸಲುˌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಸ್ಥಳೀಯ ವ್ಯವಹಾರಗಳಿಗೆ ಅವಕಾಶಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯಿಂದಾಗಿ ನಮ್ಮ ಪ್ರದೇಶಕ್ಕೆ ಗರಿಷ್ಠ ಮಟ್ಟದ ಪ್ರಯೋಜನಗಳು ದೊರೆಯಲಿವೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಪ್ರತಿನಿಧಿಯಾಗಿ ಕ್ಷೇತ್ರದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ದಿಗೆ ಬದ್ಧನಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago