ಮೈಸೂರು: ಜೂನ್ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜೂನ್ 2027 ರೊಳಗೆ ಪೂರ್ಣಗೊಳ್ಳಲು ನಿರ್ಧರಿಸಲಾಗಿರುವ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಯು ಇದೀಗ ಸ್ಥಿರ ಪ್ರಗತಿಯಲ್ಲಿದೆ. ಈ ಹೆದ್ದಾರಿಯೂ 92.3 ಕಿ.ಮೀ.ಗಳಷ್ಟು ವಿಸ್ತಾರವಾದ ಈ ನಾಲ್ಕು ಪಥದ ಪ್ರವೇಶ-ನಿಯಂತ್ರಿತ ಹೆದ್ದಾರಿಯಾಗಿದೆ. ಅಲ್ಲದೇ ಮೈಸೂರು ಮತ್ತು ಕುಶಾಲನಗರದ ಪ್ರಯಾಣದ ಸಮಯವನ್ನು ಕನಿಷ್ಠ 1-1.5 ಗಂಟೆಗಳಿಗೆ ಕಡಿತಗೊಳಿಸಲಿದೆ. ಇನ್ನೂ ಬೆಂಗಳೂರಿನಿಂದ ಕುಶಾಲನಗರದವರೆಗೆ ಪ್ರಯಾಣಿಸಲು ಕೇವಲ 3-3.5ಗಂಟೆಗಳ ಸಮಯ ತಗಲುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಜೂರು ಮಾಡಿದ 4,129 ಕೋಟಿ ರೂ. ಬಜೆಟ್ನೊಂದಿಗೆ ಈ ಯೋಜನೆಯು ಈಗಾಗಲೇ ಗಣನೀಯವಾದ ಪ್ರಗತಿ ಕಾಣುತ್ತಿದೆ. ಇದರಲ್ಲಿ ಹೆಚ್ಚಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರಣ್ಯ ಪ್ರದೇಶದ ತೆರುವಿಗೆ ಅನುಮತಿಯೂ ಸಹ ದೊರೆತಿದೆ ಎಂದು ಹೇಳಿದ್ದಾರೆ.
ಈ ಬಹುನಿರೀಕ್ಷಿತ ಯೋಜನೆಯು ಪೂರ್ಣಗೊಂಡ ನಂತರ ಮೈಸೂರು ಮತ್ತು ಕೊಡಗಿನಲ್ಲಿ ಹೆದ್ದಾರಿ ಸಂಪರ್ಕ ಸುಧಾರಣೆಗೊಳ್ಳುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ವೇಗ ನೀಡುತ್ತದೆ. ಅಲ್ಲದೇ ವ್ಯಾಪಾರ ಮತ್ತು ಹೂಡಿಕೆಗಳನ್ನು ಆಕರ್ಷಿಸಲುˌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಸ್ಥಳೀಯ ವ್ಯವಹಾರಗಳಿಗೆ ಅವಕಾಶಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯಿಂದಾಗಿ ನಮ್ಮ ಪ್ರದೇಶಕ್ಕೆ ಗರಿಷ್ಠ ಮಟ್ಟದ ಪ್ರಯೋಜನಗಳು ದೊರೆಯಲಿವೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಪ್ರತಿನಿಧಿಯಾಗಿ ಕ್ಷೇತ್ರದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ದಿಗೆ ಬದ್ಧನಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…