ಮೈಸೂರು :ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸದರಾದ ಬಳಿಕ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ, ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು.
ಇನ್ನು ಮುಂಜಾನೆಯಿಂದಲೂ ಕೂಡ ತಾಯಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬರುವ ಭಕ್ತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಬರುವಂತ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ಉಪಹಾರ, ಪ್ರಸಾದ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನ ಒದಗಿಸಲಾಗಿದೆ.
ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಆಗಮಿಸುವ ಭಕ್ತರಿಗಾಗಿ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಕೇವಲ ಶುಕ್ರವಾರ ಮಾತ್ರ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಚಾಮುಂಡೆಶ್ವರಿ ದೇವಿ ದರ್ಶನಕ್ಕೆ ಪಾಸ್ ವ್ಯವಸ್ಥೆ ರದ್ದು ಮಾಡಲಾಗಿದೆ. ಜನರು ಸರತಿ ಸಾಲಿನಲ್ಲಿ ದೇಗುಲ ಪ್ರವೇಶಿಸಲು ಬ್ಯಾರಿಕೇಡ್ ಅಳವಡಿಸಲಾಗಿದೆ. ಅಲ್ದೆ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮಾರಾ ಕೂಡ ಅಳವಡಿಸಲಾಗಿದೆ.
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…