ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಿನ್ನೆ ನವಜಾತ ಶಿಶುವೊಂದು ಸಾವನ್ನಪ್ಪಿತ್ತು. ಶಿಶು ಸಾವನ್ನಪ್ಪುತ್ತಿದ್ದಂತೆ ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇರುವೆ ಕಚ್ಚಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಐಸಿಯುಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದರು, ಆಸ್ಪತ್ರೆಯ ಆವರಣವನ್ನು ಸಹ ವೀಕ್ಷಿಸಿದರು.
ಘಟನೆಯ ಬಗ್ಗೆ ವೈದ್ಯಧಿಕಾರಿಗಳ ಬಳಿ ಮಾಹಿತಿ ಪಡೆದ ಬಳಿಕ ಆಸ್ಪತ್ರೆಯಲ್ಲಿದ್ದ ಜನರ ಸಮಸ್ಯೆಯನ್ನು ಆಲಿಸಿದರು. ಆಸ್ಪತ್ರೆಯಲ್ಲಿ ಏನೆಲ್ಲಾ ಸಮಸ್ಯೆಗಳಿದೆ. ಯಾವ ಅನುಕೂಲಗಳು ಬೇಕಾಗಿದೆ. ಈ ಬಗ್ಗೆ ಪಟ್ಟಿ ಮಾಡಿಕೊಡಿ ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯುವ ಬಿಸಿನೀರಿನ ಸಮಸ್ಯೆ ಇದೆ ಎಂದು ರೋಗಿಗಳು ಅಳಲು ತೋಡಿಕೊಂಡರು. ಈ ವೇಳೆ ಕೇವಲ 10 ನಿಮಿಷದಲ್ಲೇ ಹೊಸದಾದ ಬಿಸಿನೀರಿನ ಯಂತ್ರ ಉಡುಗೊರೆ ನೀಡಿದ ಸಂಸದರು ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕೆಲಸ ಮಾಡಿ ಎಂದು ಆಸ್ಪತ್ರೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…