ಮೈಸೂರು ನಗರ

ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಆಷಾಡ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನೆಲೆಯಲ್ಲಿ ಖುದ್ದು ಬೆಟ್ಟಕ್ಕೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ಬೆಟ್ಟದಲ್ಲಿ ಕಲ್ಪಿಸಿರುವ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಪ್ರಾಧಿಕಾರದ ಕಾರ್ಯದರ್ಶಿ ರೂಪರೊಡಗೂಡಿ 2000 ಟಿಕೆಟ್, 300ರೂ ಟಿಕೆಟ್ ಹಾಗೂ ಸಾಮಾನ್ಯ ದರ್ಶನ ಭಾಗದಲ್ಲಿ ವೀಕ್ಷಣೆ ನಡೆಸಿ, ಅವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದರು.

ಇದೇ ವೇಳೆ ಮಾತನಾಡಿದ ಸಂಸದರು, ಬೆಟ್ಟದಲ್ಲಿ ಭಕ್ತಾಧಿಗಳಿಗೆ ಅವ್ಯವಸ್ಥೆ ಆಗಿದೆ ಎಂದು ದೂರು ಕೇಳಿ ಬಂದಿತ್ತು. ಅದರ ಪ್ರಯುಕ್ತ ಇಂದು ನಾನು ಒಬ್ಬ ಜನಪ್ರತಿನಿಧಿಯಾಗಿ ಭೇಟಿ ಮಾಡಿದ್ದೇನೆ. ಎಲ್ಲವನ್ನು ವೀಕ್ಷಣೆ ಮಾಡಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೋಡಿದ್ದೇನೆ. ದರ್ಶನ ಸಂದರ್ಭದಲ್ಲಿ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ಧರ್ಮ ದರ್ಶನ, ಟಿಕೆಟ್ ಪಡೆದು ಹೋಗುವವರು ಎಲ್ಲರಿಗೂ ಒಂದು ಕಡೆ ಬಂದು ಸೇರಿ ಸಾಕಷ್ಟು ಗೊಂದಲ ಉಂಟಾಗುತ್ತಿದೆ ಮತ್ತು ಪ್ರಸಾದ ವಿತರಣೆಯಲ್ಲೂ ಸರಿಯಾಗಿ ವಿತರಣೆ ಮಾಡುತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

ಇನ್ನು 2000 ಟಿಕೆಟ್‌ನಿಂದ ಭಕ್ತರಿಗೆ ತೊಂದರೆ ಆಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದೆ. ಸರ್ಕಾರ ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕು. 2000 ತುಂಬಾ ದುಬಾರಿಯಾಯಿತು ಎಂದು ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.

ಇನ್ನು ಚಾಮುಂಡಿಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಬರುವ ಭಕ್ತರಿಗೂ ಸಮಸ್ಯೆ ಆಗಬಾರದು. ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚೆಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೆಯೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

5 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

5 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

6 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

9 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

9 hours ago