ಮೈಸೂರು: ಮುಡಾ ಹಗರಣದಲ್ಲಿ 14 ಬದಲಿ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು, ತಮ್ಮ 14 ಸೈಟ್ಗಳನ್ನು ವಾಪಸ್ ನೀಡುವುದಾಗಿ ಮುಡಾಗೆ ಪತ್ರ ಬರೆದಿದ್ದರು. ಇದನ್ನು ಮುಡಾ 24 ಗಂಟೆಯೊಳಗೆ ಸ್ವೀಕರಿಸಿದ್ದಲ್ಲದೇ ಪತ್ರವನ್ನು ಅಂಗೀಕರಿಸಿ ಇ.ಡಿ ನಿವೇಶನವನ್ನು ವಶಕ್ಕೆ ಪಡೆಯುವ ಮೊದಲೇ ಖಾತೆ ರದ್ದುಗೊಳಿಸಿದೆ.
ಮುಡಾ ಹಗರಣ ಇಡೀ ರಾಜ್ಯದಲ್ಲೇ ಕಳೆದ 3 ತಿಂಗಳಿನಿಂದ ಸದ್ದು ಮಾಡುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಲ್ಲದೇ, ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ ನಿನ್ನೆ ಇ.ಡಿ.ಯಲ್ಲಿ ಇಸಿಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸಿಎಂ ಪತ್ನಿ ಪಾರ್ವತಿ ಅವರು, ತಮ್ಮ ಬಳಿಯಿರುವ ನಿವೇಶನಗಳನ್ನು ವಶಪಡಿಸಿಕೊಳ್ಳುವಂತೆ ಮುಡಾಗೆ ಪತ್ರ ಬರೆದಿದ್ದರು.
ಈ ಪತ್ರವನ್ನು 24 ಗಂಟೆಯೊಳಗೆ ಅಂಗೀಕರಿಸಿದ ಮುಡಾ ಆಯುಕ್ತ ರಘುನಂದನ್ ಅವರು, ಇ.ಡಿ. ಅಧಿಕಾರಿಗಳು ನಿವೇಶನವನ್ನು ತಮ್ಮ ಸ್ವಾಧೀನಕ್ಕೆ ಪಡೆಯುವ ಮೊದಲೇ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದ್ದಾರೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…