ಮೈಸೂರು: ಮುಡಾ ಹಗರಣದಲ್ಲಿ 14 ಬದಲಿ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು, ತಮ್ಮ 14 ಸೈಟ್ಗಳನ್ನು ವಾಪಸ್ ನೀಡುವುದಾಗಿ ಮುಡಾಗೆ ಪತ್ರ ಬರೆದಿದ್ದರು. ಇದನ್ನು ಮುಡಾ 24 ಗಂಟೆಯೊಳಗೆ ಸ್ವೀಕರಿಸಿದ್ದಲ್ಲದೇ ಪತ್ರವನ್ನು ಅಂಗೀಕರಿಸಿ ಇ.ಡಿ ನಿವೇಶನವನ್ನು ವಶಕ್ಕೆ ಪಡೆಯುವ ಮೊದಲೇ ಖಾತೆ ರದ್ದುಗೊಳಿಸಿದೆ.
ಮುಡಾ ಹಗರಣ ಇಡೀ ರಾಜ್ಯದಲ್ಲೇ ಕಳೆದ 3 ತಿಂಗಳಿನಿಂದ ಸದ್ದು ಮಾಡುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಲ್ಲದೇ, ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ ನಿನ್ನೆ ಇ.ಡಿ.ಯಲ್ಲಿ ಇಸಿಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸಿಎಂ ಪತ್ನಿ ಪಾರ್ವತಿ ಅವರು, ತಮ್ಮ ಬಳಿಯಿರುವ ನಿವೇಶನಗಳನ್ನು ವಶಪಡಿಸಿಕೊಳ್ಳುವಂತೆ ಮುಡಾಗೆ ಪತ್ರ ಬರೆದಿದ್ದರು.
ಈ ಪತ್ರವನ್ನು 24 ಗಂಟೆಯೊಳಗೆ ಅಂಗೀಕರಿಸಿದ ಮುಡಾ ಆಯುಕ್ತ ರಘುನಂದನ್ ಅವರು, ಇ.ಡಿ. ಅಧಿಕಾರಿಗಳು ನಿವೇಶನವನ್ನು ತಮ್ಮ ಸ್ವಾಧೀನಕ್ಕೆ ಪಡೆಯುವ ಮೊದಲೇ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದ್ದಾರೆ.
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…