ಮೈಸೂರು: ಮುಡಾ ಹಗರಣದಲ್ಲಿ 14 ಬದಲಿ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು, ತಮ್ಮ 14 ಸೈಟ್ಗಳನ್ನು ವಾಪಸ್ ನೀಡುವುದಾಗಿ ಮುಡಾಗೆ ಪತ್ರ ಬರೆದಿದ್ದರು. ಇದನ್ನು ಮುಡಾ 24 ಗಂಟೆಯೊಳಗೆ ಸ್ವೀಕರಿಸಿದ್ದಲ್ಲದೇ ಪತ್ರವನ್ನು ಅಂಗೀಕರಿಸಿ ಇ.ಡಿ ನಿವೇಶನವನ್ನು ವಶಕ್ಕೆ ಪಡೆಯುವ ಮೊದಲೇ ಖಾತೆ ರದ್ದುಗೊಳಿಸಿದೆ.
ಮುಡಾ ಹಗರಣ ಇಡೀ ರಾಜ್ಯದಲ್ಲೇ ಕಳೆದ 3 ತಿಂಗಳಿನಿಂದ ಸದ್ದು ಮಾಡುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಲ್ಲದೇ, ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ ನಿನ್ನೆ ಇ.ಡಿ.ಯಲ್ಲಿ ಇಸಿಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸಿಎಂ ಪತ್ನಿ ಪಾರ್ವತಿ ಅವರು, ತಮ್ಮ ಬಳಿಯಿರುವ ನಿವೇಶನಗಳನ್ನು ವಶಪಡಿಸಿಕೊಳ್ಳುವಂತೆ ಮುಡಾಗೆ ಪತ್ರ ಬರೆದಿದ್ದರು.
ಈ ಪತ್ರವನ್ನು 24 ಗಂಟೆಯೊಳಗೆ ಅಂಗೀಕರಿಸಿದ ಮುಡಾ ಆಯುಕ್ತ ರಘುನಂದನ್ ಅವರು, ಇ.ಡಿ. ಅಧಿಕಾರಿಗಳು ನಿವೇಶನವನ್ನು ತಮ್ಮ ಸ್ವಾಧೀನಕ್ಕೆ ಪಡೆಯುವ ಮೊದಲೇ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…