ಮೈಸೂರು ನಗರ

ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ದೂರು ನೀಡಲು SPಕಚೇರಿಯಲ್ಲಿ ಕಾದ ದೂರುದಾರ ಸ್ಹೇಹಮಹಿ ಕೃಷ್ಣ

ಮೈಸೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಲು ಲೋಕಾಯುಕ್ತ ಎಸ್‌.ಪಿ ಕಚೇರಿಯಲ್ಲಿ ಕಾದು ಕುಳಿತ್ತಿದ್ದರು. ಎರಡು ಗಂಟೆ ಕಾಲ ಕಾದರೂ ಕಚೇರಿಗೆ ಎಸ್‌.ಪಿ ಆಗಮಿಸಿದ ಹಿನ್ನಲೆ ಸಿದ್ದರಾಮಯ್ಯ ಕಡೆಯವರು ಎಸ್‌.ಪಿಯನ್ನು ಅಪಹರಣ ಮಾಡಿರಬಹುದು ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಪ್ರಕರಣದಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಿರುವ ಆದೇಶದ ಆನ್‌ಲೈನ್‌ ಪ್ರತಿಯೊಂದಿಗೆ ಮಧ್ಯಾಹ್ನ 12;30ರ ಸುಮಾರಿಗೆ ಅವರು ಲೋಕಾಯುಕ್ತ ಕಚೇರಿಗೆ ಬಂದಿದ್ದರು. ಆದರೆ, ಈ ಸಂದರ್ಭ ಎಸ್‌.ಪಿ ಉದೇಶ್‌ ಕಚೇರಿಯಲ್ಲಿ ಇರಲಿಲ್ಲ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ದೂರುದಾರ ಸ್ಹೇಹಮಹಿ ಕೃಷ್ಣ, ನಿನ್ನೆಯೇ ನಾನು ಬರುವ ಬಗ್ಗೆಮಾಹಿತಿ ನೀಡಿದ್ದೆ. ಆದರೂ ಲೋಕಯುಕ್ತ ಕಚೇರಿಯಲ್ಲಿ ಎಸ್‌ಪಿ ಇರಲಿಲ್ಲ. ಇದನ್ನ ನೋಡಿದರೆ ನನಗೆ ಅವರನ್ನು ಅಪಹರಣ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂಬ ಗಂಭೀರ ಆರೋಪ ಮಾಡಿದರು.

ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ.ಹೀಗಾಗಿ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವಹಿಸಿ ಎಂದು ನಾಳೆ ಹೈಕೋರ್ಟ್‌ಗೆ ಅರ್ಜಿ ಹಾಕ್ತವೇ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

9 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

10 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

11 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

12 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

12 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

13 hours ago