ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ 20ಕ್ಕೂ ಅಧಿಕ ಅಧಿಕಾರಿಗಳು ಇಂದು(ಅಕ್ಟೋಬರ್.18) ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುಂತೆ ಇ.ಡಿ.ಯೂ ಸಮನ್ಸ್ ನೀಡಿತ್ತು. ಈ ಸಮನ್ಸ್ ಅನ್ವಯ ಸ್ನೇಹಮಯಿ ಕೃಷ್ಣ ಅವರು ಕೃಷ್ಣ ಶಾಂತಿನಗರದ ಇ.ಡಿ.ಕಚೇರಿಯಲ್ಲಿ ವಿಚಾರಣೆಯನ್ನು ಎದುರಿಸಿದ್ದರು. ಈ ವೇಳೆ ಇ.ಡಿ.ಅಧಿಕಾರಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 500 ಪುಟಗಳ ದಾಖಲೆಗಳನ್ನು ಸಹ ನೀಡಿದ್ದರು.
ಸ್ನೇಹಮಯಿ ಕೃಷ್ಣ ಅವರು ನೀಡಿದ ದಾಖಲೆಗಳನ್ನು ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ ಇಸಿಐಆರ್ ದಾಖಲಿಸಿದ್ದರು. ಅಲ್ಲದೇ, ಈ ದಾಖಲೆಗಳ ಆಧಾರದ ಮೇಲೆ ಹೆಚ್ಚಿನ ತನಿಖೆಗಾಗಿ ಇಂದು ಮುಡಾ ಕಚೇರಿ ಹಾಗೂ ಭೂ ಮಾಲೀಕ ದೇವರಾಜು ಅವರ ಬೆಂಗಳೂರಿನ ಕೆಂಗೇರಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…