ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥರಿಗೆ ಸರ್ಚ್ ವಾರೆಂಟ್ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇ-ಮೇಲ್ ಮೂಲಕ ರಾಜ್ಯಪಾಲರಿಗೆ ಆರ್ಟಿಐ ಕಾರ್ಯಕರ್ತ ಗಂಗರಾಜು ದೂರು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಲೋಕಾಯುಕ್ತ ಅಧಿಕಾರಿಗಳು, ಸಚಿವ ಭೈರತಿ ಸುರೇಶ್, ವಿಶೇಷ ಕರ್ತವ್ಯಾಧಿಕಾರಿ ಮಾರುತಿ ಬಗಲಿ, ಮುಡಾದ ಹಳೆಯ ಆಯುಕ್ತರಾದ ನಟೇಶ್ ಮತ್ತು ದಿನೇಶ್ ವಿರುದ್ಧ ರಾಜ್ಯಪಾಲರಿಗೆ ಇ-ಮೇಲ್ ಮತ್ತು ಅಂಚೆ ಪತ್ರದ ಮುಖಾಂತರ ದೂರು ಸಲ್ಲಿಕೆ ಮಾಡಿದ್ದಾರೆ.
ಈ ಬಗ್ಗೆ ದೂರುದಾರ ಗಂಗರಾಜು ದೂರಿನಲ್ಲಿ ಉಲ್ಲೇಖಿಸಿದ್ದು, ಈ ಹಿಂದೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಒಂದು ಸಾವಿರ ಪುಟಗಳಷ್ಟು ದಾಖಲೆ ಸಂಗ್ರಹಿಸಿದ್ದರು. ಅಲ್ಲದೇ ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ ಸಾಕ್ಷಿಯನ್ನು ಕೂಡ ಸಂಗ್ರಹಿಸಿತ್ತು. ನಂತರ ಅಂದಿನ ಲೋಕಾಯುಕ್ತ ಎಸ್ಪಿಗೆ ಸರ್ಚ್ ವಾರೆಂಟ್ ನೀಡಲು ಮನವಿ ಸಲ್ಲಿಸಲಾಗಿತ್ತು. ಆದರೆ, ಎಸ್ಪಿ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿ ಸರ್ಚ್ ವಾರೆಂಟ್ ನೀಡಿದ್ದರು. ಕೆಲವು ಅಧಿಕಾರಿಗಳಿಂದ ಸರ್ಕಾರಕ್ಕೆ ಈ ಮಾಹಿತಿ ಸೋರಿಕೆಯಾಗಿತ್ತು. ಹೀಗಾಗಿ ಸಚಿವ ಭೈರತಿ ಸುರೇಶ್ ಅವರು ಆ ಸಂದರ್ಭದಲ್ಲಿ ಮುಡಾದಿಂದ ಬೆಂಗಳೂರಿಗೆ ಕಡತಗಳನ್ನು ತರಿಸಿಕೊಂಡಿದ್ದಾರೆ. ಅದಕ್ಕೆ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…