ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥರಿಗೆ ಸರ್ಚ್ ವಾರೆಂಟ್ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇ-ಮೇಲ್ ಮೂಲಕ ರಾಜ್ಯಪಾಲರಿಗೆ ಆರ್ಟಿಐ ಕಾರ್ಯಕರ್ತ ಗಂಗರಾಜು ದೂರು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಲೋಕಾಯುಕ್ತ ಅಧಿಕಾರಿಗಳು, ಸಚಿವ ಭೈರತಿ ಸುರೇಶ್, ವಿಶೇಷ ಕರ್ತವ್ಯಾಧಿಕಾರಿ ಮಾರುತಿ ಬಗಲಿ, ಮುಡಾದ ಹಳೆಯ ಆಯುಕ್ತರಾದ ನಟೇಶ್ ಮತ್ತು ದಿನೇಶ್ ವಿರುದ್ಧ ರಾಜ್ಯಪಾಲರಿಗೆ ಇ-ಮೇಲ್ ಮತ್ತು ಅಂಚೆ ಪತ್ರದ ಮುಖಾಂತರ ದೂರು ಸಲ್ಲಿಕೆ ಮಾಡಿದ್ದಾರೆ.
ಈ ಬಗ್ಗೆ ದೂರುದಾರ ಗಂಗರಾಜು ದೂರಿನಲ್ಲಿ ಉಲ್ಲೇಖಿಸಿದ್ದು, ಈ ಹಿಂದೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಒಂದು ಸಾವಿರ ಪುಟಗಳಷ್ಟು ದಾಖಲೆ ಸಂಗ್ರಹಿಸಿದ್ದರು. ಅಲ್ಲದೇ ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ ಸಾಕ್ಷಿಯನ್ನು ಕೂಡ ಸಂಗ್ರಹಿಸಿತ್ತು. ನಂತರ ಅಂದಿನ ಲೋಕಾಯುಕ್ತ ಎಸ್ಪಿಗೆ ಸರ್ಚ್ ವಾರೆಂಟ್ ನೀಡಲು ಮನವಿ ಸಲ್ಲಿಸಲಾಗಿತ್ತು. ಆದರೆ, ಎಸ್ಪಿ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿ ಸರ್ಚ್ ವಾರೆಂಟ್ ನೀಡಿದ್ದರು. ಕೆಲವು ಅಧಿಕಾರಿಗಳಿಂದ ಸರ್ಕಾರಕ್ಕೆ ಈ ಮಾಹಿತಿ ಸೋರಿಕೆಯಾಗಿತ್ತು. ಹೀಗಾಗಿ ಸಚಿವ ಭೈರತಿ ಸುರೇಶ್ ಅವರು ಆ ಸಂದರ್ಭದಲ್ಲಿ ಮುಡಾದಿಂದ ಬೆಂಗಳೂರಿಗೆ ಕಡತಗಳನ್ನು ತರಿಸಿಕೊಂಡಿದ್ದಾರೆ. ಅದಕ್ಕೆ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…
ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್ಪಿಜಿ ಪೂರೈಕೆಯನ್ನು…
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…