ಮೈಸೂರು ನಗರ

ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಇ-ಮೇಲ್‌ ಮೂಲಕ ರಾಜ್ಯಪಾಲರಿಗೆ ದೂರು

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥರಿಗೆ ಸರ್ಚ್‌ ವಾರೆಂಟ್‌ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇ-ಮೇಲ್‌ ಮೂಲಕ ರಾಜ್ಯಪಾಲರಿಗೆ ಆರ್‌ಟಿಐ ಕಾರ್ಯಕರ್ತ ಗಂಗರಾಜು ದೂರು ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಲೋಕಾಯುಕ್ತ ಅಧಿಕಾರಿಗಳು, ಸಚಿವ ಭೈರತಿ ಸುರೇಶ್‌, ವಿಶೇಷ ಕರ್ತವ್ಯಾಧಿಕಾರಿ ಮಾರುತಿ ಬಗಲಿ, ಮುಡಾದ ಹಳೆಯ ಆಯುಕ್ತರಾದ ನಟೇಶ್‌ ಮತ್ತು ದಿನೇಶ್‌ ವಿರುದ್ಧ ರಾಜ್ಯಪಾಲರಿಗೆ ಇ-ಮೇಲ್‌ ಮತ್ತು ಅಂಚೆ ಪತ್ರದ ಮುಖಾಂತರ ದೂರು ಸಲ್ಲಿಕೆ ಮಾಡಿದ್ದಾರೆ.

ಈ ಬಗ್ಗೆ ದೂರುದಾರ ಗಂಗರಾಜು ದೂರಿನಲ್ಲಿ ಉಲ್ಲೇಖಿಸಿದ್ದು, ಈ ಹಿಂದೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಒಂದು ಸಾವಿರ ಪುಟಗಳಷ್ಟು ದಾಖಲೆ ಸಂಗ್ರಹಿಸಿದ್ದರು. ಅಲ್ಲದೇ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ರವಿಕುಮಾರ್‌ ನೇತೃತ್ವದ ತಂಡ ಸಾಕ್ಷಿಯನ್ನು ಕೂಡ ಸಂಗ್ರಹಿಸಿತ್ತು. ನಂತರ ಅಂದಿನ ಲೋಕಾಯುಕ್ತ ಎಸ್‌ಪಿಗೆ ಸರ್ಚ್‌ ವಾರೆಂಟ್‌ ನೀಡಲು ಮನವಿ ಸಲ್ಲಿಸಲಾಗಿತ್ತು. ಆದರೆ, ಎಸ್‌ಪಿ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿ ಸರ್ಚ್‌ ವಾರೆಂಟ್‌ ನೀಡಿದ್ದರು. ಕೆಲವು ಅಧಿಕಾರಿಗಳಿಂದ ಸರ್ಕಾರಕ್ಕೆ ಈ ಮಾಹಿತಿ ಸೋರಿಕೆಯಾಗಿತ್ತು. ಹೀಗಾಗಿ ಸಚಿವ ಭೈರತಿ ಸುರೇಶ್‌ ಅವರು ಆ ಸಂದರ್ಭದಲ್ಲಿ ಮುಡಾದಿಂದ ಬೆಂಗಳೂರಿಗೆ ಕಡತಗಳನ್ನು ತರಿಸಿಕೊಂಡಿದ್ದಾರೆ. ಅದಕ್ಕೆ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago