ಮೈಸೂರು ನಗರ

ಮುಡಾ ಹಗರಣ: ಸಿಎಂ ಪತ್ನಿ ಈಗ ನಿವೇಶನ ವಾಪಸ್‌ ಕೊಟ್ಟರೆ ಪ್ರಯೋಜನವಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಮುಡಾ ಹಗರಣದಲ್ಲಿ ತನಿಖೆ ಹಂತಕ್ಕೆ ಹೋದಮೇಲೆ ಸಿಎಂ ಪತ್ನಿ ಈಗ ನಿವೇಶನಗಳನ್ನು ವಾಪಸ್‌ ಕೊಟ್ಟರೆ ಏನು ಪ್ರಯೋಜನವಿಲ್ಲ, ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಅಷ್ಟೇ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಬೆಳಕಿಗೆ ಬಂದ ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ನಿವೇಶನವನ್ನು ವಾಪಾಸ್‌ ನೀಡಿ, ಮುಕ್ತ ತನಿಖೆ ಎದುರಿಸುವಂತೆ ಸಲಹೆ ನೀಡಿದ್ದೆ. ಆದರೆ ಸಿದ್ದರಾಮಯ್ಯ ಅವರು ಕೇಳಲಿಲ್ಲ. ಇ.ಡಿ.ಯಲ್ಲಿ ಹಗರಣದ ಬಗ್ಗೆ ಪ್ರಕರಣ ದಾಖಲಾದ ನಂತರ ನಿವೇಶನಗಳನ್ನು ವಾಪಾಸ್‌ ಕೊಟ್ಟಿದ್ದಾರೆ. ಈ ಹಿಂದೆಯೇ ನಿವೇಶನಗಳನ್ನು ವಾಪಾಸ್‌ ನೀಡಿದ್ದರೆ ಸಿಎಂ ಕುರ್ಚಿ ಕಳೆದುಕೊಳ್ಳುವ ಪ್ರಮೇಯವೇ ಎದುರಾಗುತ್ತಿರಲಿಲ್ಲ. ನಿವೇಶನಗಳನ್ನು ಈಗ ಕೊಟ್ಟರೆ ಏನು ಪ್ರಯೋಜನ ಇಲ್ಲ. ಈಗ ಸಿದ್ದರಾಮಯ್ಯ ಅವರ ಮುಂದೆ ಇರುವುದು ಒಂದೇ ದಾರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಅಷ್ಟೇ ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ 2023ರ ವಿಧಾನಸಭಾ ಚುನಾವಣೆಯಲ್ಲಿಯೇ ಮುಡಾದ 50:50 ಅನುಪಾತದ ಬದಲಿ ನಿವೇಶನಗಳ ಬಗ್ಗೆ ಅಕ್ರಮದ ದಾಖಲೆ ಬಂದಿತ್ತು. ಆದರೆ ಅವರು ಸಿದ್ದರಾಮಯ್ಯ ಅವರ ಪತ್ನಿ ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸಲಿಲ್ಲ ಎಂದು ತಿಳಿಸಿದರು.

ಈ ಹಗರಣ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣಕ್ಕೆ ಒಂದು ಪಾಠ

ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕೀಯ ಮಾಡುವ ಎಲ್ಲ ರಾಜಕಾರಣಿಗಳಿಗೂ ಈ ಹಗರಣ ಒಂದು ಮಾದರಿಯ ಪಾಠವಾಗಿರಲಿದೆ. ಕುಟುಂಬ ರಾಜಕಾರಣ ಮಾಡುವ ವ್ಯಕ್ತಿಗಳು ಮುಂದೆ ಆದರೂ ಎಚ್ಚರಿಕೆಯಿಂದ ಹೆಜ್ಜೆ ಇಡುವಮತಾಗಬೇಕು. ಇಲ್ಲವಾದರೆ ನಿಮ್ಮ ಸ್ಥಾನದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಮಾಡಿ ಸಿಕ್ಕಿಹಾಕಿಕೊಳ್ಳುತ್ತಾರೆ. ಇತಂಹ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡ ನಂತರ ಕಣ್ಣೀರು ಹಾಕಿದರೆ ಏನು ಪ್ರಯೋಜನವಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಎಂದಿಗೂ ಬಹಿರಂಗವಾಗಿ ಕಾಣಿಸಿಕೊಂಡವರಲ್ಲ. ಇಂದು ಅವರು ಈ ಹಗರಣದಿಂದ ಕಟಕಟೆಗೆ ಬಂದು ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅವರ ಬಗ್ಗೆ ನನಗೆ ವೈಯಕ್ತಿಕ ಮರುಕ ಇದೆ. ಆದರೆ ಮುಡಾ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆಗೆ ಅನುಮತಿ ನೀಡಿದ ನಂತರ ನಿವೇಶನವನ್ನು ವಾಪಾಸ್‌ ನೀಡಿದರೆ ಯಾರೂ ಒಪ್ಪುವುದಿಲ್ಲ. ಕದ್ದ ಮಾಲು ವಾಪಾಸ್‌ ಕೊಟ್ಟ ಮಾತ್ರಕ್ಕೆ ಕಳ್ಳತನವನ್ನು ಬಿಡಲು ಆಗದು. ಸಿದ್ದರಾಮಯ್ಯ ಅವರು ಮುಡಾದಿಂದ ಅಕ್ರಮವಾಗಿ ಪಡೆದ ನಿವೇಶಗಳಿಗೆ 62 ಕೋಟಿ ರೂ.ಗಳನ್ನು ಕೇಳಿದಾಗಲೇ ಅವರ ಮೇಲೆ ಇದ್ದ ಗೌರವ ನೆಲ ಕಚ್ಚಿದೆ. ಅವರಿಂದ ಈ ಮಾತನ್ನು ನೀರಿಕ್ಷಿಸರಿರಲಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago