ಮೈಸೂರು ನಗರ

ಮುಡಾ ಹಗರಣ: ಸಿಎಂ ಪತ್ನಿ ಈಗ ನಿವೇಶನ ವಾಪಸ್‌ ಕೊಟ್ಟರೆ ಪ್ರಯೋಜನವಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಮುಡಾ ಹಗರಣದಲ್ಲಿ ತನಿಖೆ ಹಂತಕ್ಕೆ ಹೋದಮೇಲೆ ಸಿಎಂ ಪತ್ನಿ ಈಗ ನಿವೇಶನಗಳನ್ನು ವಾಪಸ್‌ ಕೊಟ್ಟರೆ ಏನು ಪ್ರಯೋಜನವಿಲ್ಲ, ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಅಷ್ಟೇ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಬೆಳಕಿಗೆ ಬಂದ ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ನಿವೇಶನವನ್ನು ವಾಪಾಸ್‌ ನೀಡಿ, ಮುಕ್ತ ತನಿಖೆ ಎದುರಿಸುವಂತೆ ಸಲಹೆ ನೀಡಿದ್ದೆ. ಆದರೆ ಸಿದ್ದರಾಮಯ್ಯ ಅವರು ಕೇಳಲಿಲ್ಲ. ಇ.ಡಿ.ಯಲ್ಲಿ ಹಗರಣದ ಬಗ್ಗೆ ಪ್ರಕರಣ ದಾಖಲಾದ ನಂತರ ನಿವೇಶನಗಳನ್ನು ವಾಪಾಸ್‌ ಕೊಟ್ಟಿದ್ದಾರೆ. ಈ ಹಿಂದೆಯೇ ನಿವೇಶನಗಳನ್ನು ವಾಪಾಸ್‌ ನೀಡಿದ್ದರೆ ಸಿಎಂ ಕುರ್ಚಿ ಕಳೆದುಕೊಳ್ಳುವ ಪ್ರಮೇಯವೇ ಎದುರಾಗುತ್ತಿರಲಿಲ್ಲ. ನಿವೇಶನಗಳನ್ನು ಈಗ ಕೊಟ್ಟರೆ ಏನು ಪ್ರಯೋಜನ ಇಲ್ಲ. ಈಗ ಸಿದ್ದರಾಮಯ್ಯ ಅವರ ಮುಂದೆ ಇರುವುದು ಒಂದೇ ದಾರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಅಷ್ಟೇ ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ 2023ರ ವಿಧಾನಸಭಾ ಚುನಾವಣೆಯಲ್ಲಿಯೇ ಮುಡಾದ 50:50 ಅನುಪಾತದ ಬದಲಿ ನಿವೇಶನಗಳ ಬಗ್ಗೆ ಅಕ್ರಮದ ದಾಖಲೆ ಬಂದಿತ್ತು. ಆದರೆ ಅವರು ಸಿದ್ದರಾಮಯ್ಯ ಅವರ ಪತ್ನಿ ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸಲಿಲ್ಲ ಎಂದು ತಿಳಿಸಿದರು.

ಈ ಹಗರಣ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣಕ್ಕೆ ಒಂದು ಪಾಠ

ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕೀಯ ಮಾಡುವ ಎಲ್ಲ ರಾಜಕಾರಣಿಗಳಿಗೂ ಈ ಹಗರಣ ಒಂದು ಮಾದರಿಯ ಪಾಠವಾಗಿರಲಿದೆ. ಕುಟುಂಬ ರಾಜಕಾರಣ ಮಾಡುವ ವ್ಯಕ್ತಿಗಳು ಮುಂದೆ ಆದರೂ ಎಚ್ಚರಿಕೆಯಿಂದ ಹೆಜ್ಜೆ ಇಡುವಮತಾಗಬೇಕು. ಇಲ್ಲವಾದರೆ ನಿಮ್ಮ ಸ್ಥಾನದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಮಾಡಿ ಸಿಕ್ಕಿಹಾಕಿಕೊಳ್ಳುತ್ತಾರೆ. ಇತಂಹ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡ ನಂತರ ಕಣ್ಣೀರು ಹಾಕಿದರೆ ಏನು ಪ್ರಯೋಜನವಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಎಂದಿಗೂ ಬಹಿರಂಗವಾಗಿ ಕಾಣಿಸಿಕೊಂಡವರಲ್ಲ. ಇಂದು ಅವರು ಈ ಹಗರಣದಿಂದ ಕಟಕಟೆಗೆ ಬಂದು ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅವರ ಬಗ್ಗೆ ನನಗೆ ವೈಯಕ್ತಿಕ ಮರುಕ ಇದೆ. ಆದರೆ ಮುಡಾ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆಗೆ ಅನುಮತಿ ನೀಡಿದ ನಂತರ ನಿವೇಶನವನ್ನು ವಾಪಾಸ್‌ ನೀಡಿದರೆ ಯಾರೂ ಒಪ್ಪುವುದಿಲ್ಲ. ಕದ್ದ ಮಾಲು ವಾಪಾಸ್‌ ಕೊಟ್ಟ ಮಾತ್ರಕ್ಕೆ ಕಳ್ಳತನವನ್ನು ಬಿಡಲು ಆಗದು. ಸಿದ್ದರಾಮಯ್ಯ ಅವರು ಮುಡಾದಿಂದ ಅಕ್ರಮವಾಗಿ ಪಡೆದ ನಿವೇಶಗಳಿಗೆ 62 ಕೋಟಿ ರೂ.ಗಳನ್ನು ಕೇಳಿದಾಗಲೇ ಅವರ ಮೇಲೆ ಇದ್ದ ಗೌರವ ನೆಲ ಕಚ್ಚಿದೆ. ಅವರಿಂದ ಈ ಮಾತನ್ನು ನೀರಿಕ್ಷಿಸರಿರಲಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

2 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

3 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

5 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

6 hours ago