ಮೈಸೂರು ನಗರ

ಮುಡಾ ಹಗರಣ: ಸಿಎಂ ಪತ್ನಿ ಈಗ ನಿವೇಶನ ವಾಪಸ್‌ ಕೊಟ್ಟರೆ ಪ್ರಯೋಜನವಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಮುಡಾ ಹಗರಣದಲ್ಲಿ ತನಿಖೆ ಹಂತಕ್ಕೆ ಹೋದಮೇಲೆ ಸಿಎಂ ಪತ್ನಿ ಈಗ ನಿವೇಶನಗಳನ್ನು ವಾಪಸ್‌ ಕೊಟ್ಟರೆ ಏನು ಪ್ರಯೋಜನವಿಲ್ಲ, ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಅಷ್ಟೇ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಬೆಳಕಿಗೆ ಬಂದ ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ನಿವೇಶನವನ್ನು ವಾಪಾಸ್‌ ನೀಡಿ, ಮುಕ್ತ ತನಿಖೆ ಎದುರಿಸುವಂತೆ ಸಲಹೆ ನೀಡಿದ್ದೆ. ಆದರೆ ಸಿದ್ದರಾಮಯ್ಯ ಅವರು ಕೇಳಲಿಲ್ಲ. ಇ.ಡಿ.ಯಲ್ಲಿ ಹಗರಣದ ಬಗ್ಗೆ ಪ್ರಕರಣ ದಾಖಲಾದ ನಂತರ ನಿವೇಶನಗಳನ್ನು ವಾಪಾಸ್‌ ಕೊಟ್ಟಿದ್ದಾರೆ. ಈ ಹಿಂದೆಯೇ ನಿವೇಶನಗಳನ್ನು ವಾಪಾಸ್‌ ನೀಡಿದ್ದರೆ ಸಿಎಂ ಕುರ್ಚಿ ಕಳೆದುಕೊಳ್ಳುವ ಪ್ರಮೇಯವೇ ಎದುರಾಗುತ್ತಿರಲಿಲ್ಲ. ನಿವೇಶನಗಳನ್ನು ಈಗ ಕೊಟ್ಟರೆ ಏನು ಪ್ರಯೋಜನ ಇಲ್ಲ. ಈಗ ಸಿದ್ದರಾಮಯ್ಯ ಅವರ ಮುಂದೆ ಇರುವುದು ಒಂದೇ ದಾರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಅಷ್ಟೇ ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ 2023ರ ವಿಧಾನಸಭಾ ಚುನಾವಣೆಯಲ್ಲಿಯೇ ಮುಡಾದ 50:50 ಅನುಪಾತದ ಬದಲಿ ನಿವೇಶನಗಳ ಬಗ್ಗೆ ಅಕ್ರಮದ ದಾಖಲೆ ಬಂದಿತ್ತು. ಆದರೆ ಅವರು ಸಿದ್ದರಾಮಯ್ಯ ಅವರ ಪತ್ನಿ ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸಲಿಲ್ಲ ಎಂದು ತಿಳಿಸಿದರು.

ಈ ಹಗರಣ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣಕ್ಕೆ ಒಂದು ಪಾಠ

ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕೀಯ ಮಾಡುವ ಎಲ್ಲ ರಾಜಕಾರಣಿಗಳಿಗೂ ಈ ಹಗರಣ ಒಂದು ಮಾದರಿಯ ಪಾಠವಾಗಿರಲಿದೆ. ಕುಟುಂಬ ರಾಜಕಾರಣ ಮಾಡುವ ವ್ಯಕ್ತಿಗಳು ಮುಂದೆ ಆದರೂ ಎಚ್ಚರಿಕೆಯಿಂದ ಹೆಜ್ಜೆ ಇಡುವಮತಾಗಬೇಕು. ಇಲ್ಲವಾದರೆ ನಿಮ್ಮ ಸ್ಥಾನದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಮಾಡಿ ಸಿಕ್ಕಿಹಾಕಿಕೊಳ್ಳುತ್ತಾರೆ. ಇತಂಹ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡ ನಂತರ ಕಣ್ಣೀರು ಹಾಕಿದರೆ ಏನು ಪ್ರಯೋಜನವಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಎಂದಿಗೂ ಬಹಿರಂಗವಾಗಿ ಕಾಣಿಸಿಕೊಂಡವರಲ್ಲ. ಇಂದು ಅವರು ಈ ಹಗರಣದಿಂದ ಕಟಕಟೆಗೆ ಬಂದು ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅವರ ಬಗ್ಗೆ ನನಗೆ ವೈಯಕ್ತಿಕ ಮರುಕ ಇದೆ. ಆದರೆ ಮುಡಾ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆಗೆ ಅನುಮತಿ ನೀಡಿದ ನಂತರ ನಿವೇಶನವನ್ನು ವಾಪಾಸ್‌ ನೀಡಿದರೆ ಯಾರೂ ಒಪ್ಪುವುದಿಲ್ಲ. ಕದ್ದ ಮಾಲು ವಾಪಾಸ್‌ ಕೊಟ್ಟ ಮಾತ್ರಕ್ಕೆ ಕಳ್ಳತನವನ್ನು ಬಿಡಲು ಆಗದು. ಸಿದ್ದರಾಮಯ್ಯ ಅವರು ಮುಡಾದಿಂದ ಅಕ್ರಮವಾಗಿ ಪಡೆದ ನಿವೇಶಗಳಿಗೆ 62 ಕೋಟಿ ರೂ.ಗಳನ್ನು ಕೇಳಿದಾಗಲೇ ಅವರ ಮೇಲೆ ಇದ್ದ ಗೌರವ ನೆಲ ಕಚ್ಚಿದೆ. ಅವರಿಂದ ಈ ಮಾತನ್ನು ನೀರಿಕ್ಷಿಸರಿರಲಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

3 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

3 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

3 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

3 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

3 hours ago