Mysore
20
clear sky

Social Media

ಬುಧವಾರ, 28 ಜನವರಿ 2026
Light
Dark

ಮುಡಾ ಪ್ರಕರಣ: ಎರಡನೇ ಬಾರಿ ವಿಚಾರಣೆಗೆ ಹಾಜರಾದ ಪಾಲಯ್ಯ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಮುಡಾದ ಮಾಜಿ ಅಪಾರ ಆಯುಕ್ತ ಪಾಲಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ 2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನ ಪರಿಹಾರಕ್ಕಾಗಿ ಕೋರಿ ಅರ್ಜಿ ಸಲ್ಲಿಸಿದ್ದ ವಿಚಾರವಾಗಿ ಪಾಲಯ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದ ವೇಳೆ ಪಾಲಯ್ಯ ಮುಡಾದ ಅಪಾರ ಡಿಸಿ ಆಗಿದ್ದರು. ಹೀಗಾಗಿ ಅವರನ್ನು ಎರಡನೇ ಬಾರಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.

 

Tags:
error: Content is protected !!