ಮೈಸೂರು: ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮತ್ತೊಬ್ಬ ಅರವಿಂದ್ ಕೇಜ್ರೀವಾಲ್ ಆಗ್ತಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಮೈಸೂರುನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಸಿಎಂ ಕುಟುಂಬವೇ ಮುಡಾ ಅವ್ಯವಹಾರದಲ್ಲಿ ತೊಡಗಿತ್ತು. ತನ್ನ ಭೂಮಿಯೇ ಅಲ್ಲದಿದ್ದರೂ ಪರಿಹಾರ ಪಡೆದುಕೊಂಡಿದ್ದರು. ಬಿಜೆಪಿ ಹೋರಾಟಕ್ಕೆ ಸಿಎಂ ಗೌರವ ಕೊಟ್ಟರಲಿಲ್ಲ. ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕಾಯಿತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ಕೊಡಬೇಕು. ಕೊಡದಿದ್ದರೆ ಮತ್ತೊಬ್ಬ ಕೇಜ್ರಿವಾಲ್ ಆಗುತ್ತಾರೆ. ಹೊಸದಿಲ್ಲಿಯಲ್ಲಿ ಪೊಲೀಸ್ ವ್ಯವಸ್ಥೆ ಸಿಎಂ ಬಳಿ ಇಲ್ಲ. ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಗಳು ಸಿಎಂ ಅಧೀನದಲ್ಲಿದ್ದಾರೆ. ತನಿಖೆ ನಡೆಸುವ ಅಧಿಕಾರಿಯ ಮುಂದೆ ಹಾಜರಾಗುವಾಗ ಯಾವ ಮುಖ ಹೊತ್ತು ಹೋಗುತ್ತಾರೆ ಎಂದು ಟೀಕಿಸಿದರು. ಮೌಲ್ಯ ಎತ್ತಿಹಿಡಿಯಲು ಸಿಎಂ ರಾಜೀನಾಮೆ ಕೊಡಬೇಕು. ಸಿಎಂ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಹೈಕಮಾಂಡ್ ಬೆಂಬಲಕ್ಕೆ ನಿಂತರೂ ಸಾಧ್ಯವಾಗಲ್ಲ. ೧೩೬ ಶಾಸಕರ ಬೆಂಬಲ ಇದ್ದರೂ ಕೂಡ ನ್ಯಾಯಾಲಯದ ತೀರ್ಪು ಬೇರೆಯಾಗಿದೆ. ಕಾನೂನಿನ ಮುಂದೆ ಶರಣಾಗಬೇಕು. ಹೈಕಮಾಂಡ್ಗೂ-ಸಿಎಂವಿರುದ್ದದ ತೀರ್ಪಿಗೂ ಸಂಬಂಧವಿಲ್ಲ ಎಂದು ನುಡಿದರು.
ಈ ವರ್ಷ ಬಿಡುಗಡೆಯಾದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ…
ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಎಲ್ಸಿ ಟಿಕೆಟ್ಗಾಗಿ…
ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ…
ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್ರನ್ನು ತಕ್ಷಣ ಬಂಧಿಸಬೇಕು…
ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ…
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ…