ಮೈಸೂರು: ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮತ್ತೊಬ್ಬ ಅರವಿಂದ್ ಕೇಜ್ರೀವಾಲ್ ಆಗ್ತಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಮೈಸೂರುನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಸಿಎಂ ಕುಟುಂಬವೇ ಮುಡಾ ಅವ್ಯವಹಾರದಲ್ಲಿ ತೊಡಗಿತ್ತು. ತನ್ನ ಭೂಮಿಯೇ ಅಲ್ಲದಿದ್ದರೂ ಪರಿಹಾರ ಪಡೆದುಕೊಂಡಿದ್ದರು. ಬಿಜೆಪಿ ಹೋರಾಟಕ್ಕೆ ಸಿಎಂ ಗೌರವ ಕೊಟ್ಟರಲಿಲ್ಲ. ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕಾಯಿತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ಕೊಡಬೇಕು. ಕೊಡದಿದ್ದರೆ ಮತ್ತೊಬ್ಬ ಕೇಜ್ರಿವಾಲ್ ಆಗುತ್ತಾರೆ. ಹೊಸದಿಲ್ಲಿಯಲ್ಲಿ ಪೊಲೀಸ್ ವ್ಯವಸ್ಥೆ ಸಿಎಂ ಬಳಿ ಇಲ್ಲ. ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಗಳು ಸಿಎಂ ಅಧೀನದಲ್ಲಿದ್ದಾರೆ. ತನಿಖೆ ನಡೆಸುವ ಅಧಿಕಾರಿಯ ಮುಂದೆ ಹಾಜರಾಗುವಾಗ ಯಾವ ಮುಖ ಹೊತ್ತು ಹೋಗುತ್ತಾರೆ ಎಂದು ಟೀಕಿಸಿದರು. ಮೌಲ್ಯ ಎತ್ತಿಹಿಡಿಯಲು ಸಿಎಂ ರಾಜೀನಾಮೆ ಕೊಡಬೇಕು. ಸಿಎಂ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಹೈಕಮಾಂಡ್ ಬೆಂಬಲಕ್ಕೆ ನಿಂತರೂ ಸಾಧ್ಯವಾಗಲ್ಲ. ೧೩೬ ಶಾಸಕರ ಬೆಂಬಲ ಇದ್ದರೂ ಕೂಡ ನ್ಯಾಯಾಲಯದ ತೀರ್ಪು ಬೇರೆಯಾಗಿದೆ. ಕಾನೂನಿನ ಮುಂದೆ ಶರಣಾಗಬೇಕು. ಹೈಕಮಾಂಡ್ಗೂ-ಸಿಎಂವಿರುದ್ದದ ತೀರ್ಪಿಗೂ ಸಂಬಂಧವಿಲ್ಲ ಎಂದು ನುಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…