ಮೈಸೂರು: ಸತ್ಯಮೇವ ಜಯತೇ. ಸತ್ಯ,ಕಾನೂನಿಗೆ ಜಯ ದೊರೆಯಲಿದೆ ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವೇ ನಿದರ್ಶನವಾಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಕೊಡದೆ ಇದ್ದರೂ ಹೈಕಮಾಂಡ್ ಪಡೆಯುತ್ತದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಮೊದಲು ರಾಜೀನಾಮೆ ಪಡೆಯಲಿ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.
ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ರಾಹುಲ್ಗಾಂಧಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮದೇ ಮುಖ್ಯಮಂತ್ರಿ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಒಪ್ಪಿರುವಾಗ ಯಾವ ರೀತಿ ರಾಜೀನಾಮೆ ಪಡೆಯದೆ ಇರುತ್ತಾರೆ ಎಂದು ಪ್ರಶ್ನಿಸಿದರು. ನಮಗೆ ದಾಖಲೆ ನೋಡಿಯೇ ಪ್ರಾಸಿಕ್ಯೂಷನ್ಗೆ ಅನುಮತಿ ಸಿಗುತ್ತದೆ ಎನ್ನುವುದು ಗೊತ್ತಿತ್ತು. ಮೊದಲ ದಿನವೇ ನ್ಯಾಯಾಲಯ ತಿರಸ್ಕಾರ ಮಾಡಿದ್ದರೆ ಸರಿ ಇತ್ತು. ಆದರೆ ಎಲ್ಲವನ್ನು ಪರಿಶೀಲಿಸಿ ಅನುಮತಿ ನೀಡಿರುವುದರಿಂದ ಸತ್ಯವಿದೆ ಎನ್ನುವುದು ಜನರಿಗೂ ಗೊತ್ತಾಗಿದೆ ಎಂದರು. ಸಿಎಂ ರಾಜೀನಾಮೆ ಕೊಡದಿದ್ದರೆ ಏನು ಮಾಡಬೇಕು ಎಂಬುದನ್ನು ಚರ್ಚಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ಜತೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಸಿಎಂ ಅವರಲ್ಲಿ ನೈತಿಕತೆ ಎನ್ನುವುದು ಇದ್ದರೆ ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…