ಮೈಸೂರು ನಗರ

ಮುಡಾ ಹಗರಣ: ಹೈಕೋರ್ಟ್‌ ತೀರ್ಪು ಸತ್ಯಕ್ಕೆ ಸಂದ ಜಯ: ಟಿ.ಎಸ್.ಶ್ರೀವತ್ಸ

ಮೈಸೂರು: ಸತ್ಯಮೇವ ಜಯತೇ. ಸತ್ಯ,ಕಾನೂನಿಗೆ ಜಯ ದೊರೆಯಲಿದೆ ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವೇ ನಿದರ್ಶನವಾಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಕೊಡದೆ ಇದ್ದರೂ ಹೈಕಮಾಂಡ್ ಪಡೆಯುತ್ತದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಮೊದಲು ರಾಜೀನಾಮೆ ಪಡೆಯಲಿ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ರಾಹುಲ್‌ಗಾಂಧಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮದೇ ಮುಖ್ಯಮಂತ್ರಿ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಒಪ್ಪಿರುವಾಗ ಯಾವ ರೀತಿ ರಾಜೀನಾಮೆ ಪಡೆಯದೆ ಇರುತ್ತಾರೆ ಎಂದು ಪ್ರಶ್ನಿಸಿದರು. ನಮಗೆ ದಾಖಲೆ ನೋಡಿಯೇ ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಗುತ್ತದೆ ಎನ್ನುವುದು ಗೊತ್ತಿತ್ತು. ಮೊದಲ ದಿನವೇ ನ್ಯಾಯಾಲಯ ತಿರಸ್ಕಾರ ಮಾಡಿದ್ದರೆ ಸರಿ ಇತ್ತು. ಆದರೆ ಎಲ್ಲವನ್ನು ಪರಿಶೀಲಿಸಿ ಅನುಮತಿ ನೀಡಿರುವುದರಿಂದ ಸತ್ಯವಿದೆ ಎನ್ನುವುದು ಜನರಿಗೂ ಗೊತ್ತಾಗಿದೆ ಎಂದರು. ಸಿಎಂ ರಾಜೀನಾಮೆ ಕೊಡದಿದ್ದರೆ ಏನು ಮಾಡಬೇಕು ಎಂಬುದನ್ನು ಚರ್ಚಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ಜತೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಸಿಎಂ ಅವರಲ್ಲಿ ನೈತಿಕತೆ ಎನ್ನುವುದು ಇದ್ದರೆ ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಸಲಹೆ ನೀಡಿದರು.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

1 hour ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

1 hour ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

1 hour ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

1 hour ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

1 hour ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

1 hour ago