ಮೈಸೂರು: ಸತ್ಯಮೇವ ಜಯತೇ. ಸತ್ಯ,ಕಾನೂನಿಗೆ ಜಯ ದೊರೆಯಲಿದೆ ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವೇ ನಿದರ್ಶನವಾಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಕೊಡದೆ ಇದ್ದರೂ ಹೈಕಮಾಂಡ್ ಪಡೆಯುತ್ತದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಮೊದಲು ರಾಜೀನಾಮೆ ಪಡೆಯಲಿ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.
ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ರಾಹುಲ್ಗಾಂಧಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮದೇ ಮುಖ್ಯಮಂತ್ರಿ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಒಪ್ಪಿರುವಾಗ ಯಾವ ರೀತಿ ರಾಜೀನಾಮೆ ಪಡೆಯದೆ ಇರುತ್ತಾರೆ ಎಂದು ಪ್ರಶ್ನಿಸಿದರು. ನಮಗೆ ದಾಖಲೆ ನೋಡಿಯೇ ಪ್ರಾಸಿಕ್ಯೂಷನ್ಗೆ ಅನುಮತಿ ಸಿಗುತ್ತದೆ ಎನ್ನುವುದು ಗೊತ್ತಿತ್ತು. ಮೊದಲ ದಿನವೇ ನ್ಯಾಯಾಲಯ ತಿರಸ್ಕಾರ ಮಾಡಿದ್ದರೆ ಸರಿ ಇತ್ತು. ಆದರೆ ಎಲ್ಲವನ್ನು ಪರಿಶೀಲಿಸಿ ಅನುಮತಿ ನೀಡಿರುವುದರಿಂದ ಸತ್ಯವಿದೆ ಎನ್ನುವುದು ಜನರಿಗೂ ಗೊತ್ತಾಗಿದೆ ಎಂದರು. ಸಿಎಂ ರಾಜೀನಾಮೆ ಕೊಡದಿದ್ದರೆ ಏನು ಮಾಡಬೇಕು ಎಂಬುದನ್ನು ಚರ್ಚಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ಜತೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಸಿಎಂ ಅವರಲ್ಲಿ ನೈತಿಕತೆ ಎನ್ನುವುದು ಇದ್ದರೆ ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಸಲಹೆ ನೀಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…