ಮೈಸೂರು: ಸತ್ಯಮೇವ ಜಯತೇ. ಸತ್ಯ,ಕಾನೂನಿಗೆ ಜಯ ದೊರೆಯಲಿದೆ ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವೇ ನಿದರ್ಶನವಾಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಕೊಡದೆ ಇದ್ದರೂ ಹೈಕಮಾಂಡ್ ಪಡೆಯುತ್ತದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಮೊದಲು ರಾಜೀನಾಮೆ ಪಡೆಯಲಿ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.
ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ರಾಹುಲ್ಗಾಂಧಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮದೇ ಮುಖ್ಯಮಂತ್ರಿ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಒಪ್ಪಿರುವಾಗ ಯಾವ ರೀತಿ ರಾಜೀನಾಮೆ ಪಡೆಯದೆ ಇರುತ್ತಾರೆ ಎಂದು ಪ್ರಶ್ನಿಸಿದರು. ನಮಗೆ ದಾಖಲೆ ನೋಡಿಯೇ ಪ್ರಾಸಿಕ್ಯೂಷನ್ಗೆ ಅನುಮತಿ ಸಿಗುತ್ತದೆ ಎನ್ನುವುದು ಗೊತ್ತಿತ್ತು. ಮೊದಲ ದಿನವೇ ನ್ಯಾಯಾಲಯ ತಿರಸ್ಕಾರ ಮಾಡಿದ್ದರೆ ಸರಿ ಇತ್ತು. ಆದರೆ ಎಲ್ಲವನ್ನು ಪರಿಶೀಲಿಸಿ ಅನುಮತಿ ನೀಡಿರುವುದರಿಂದ ಸತ್ಯವಿದೆ ಎನ್ನುವುದು ಜನರಿಗೂ ಗೊತ್ತಾಗಿದೆ ಎಂದರು. ಸಿಎಂ ರಾಜೀನಾಮೆ ಕೊಡದಿದ್ದರೆ ಏನು ಮಾಡಬೇಕು ಎಂಬುದನ್ನು ಚರ್ಚಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ಜತೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಸಿಎಂ ಅವರಲ್ಲಿ ನೈತಿಕತೆ ಎನ್ನುವುದು ಇದ್ದರೆ ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಸಲಹೆ ನೀಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…