ಮೈಸೂರು: ಮೈಸೂರು ನಗರಾಭಿವೃದೀ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರ ತಲೆ ತಂಡವಾಗಿದೆ.
ಮುಡಾದಲ್ಲಿ 50:50 ಸೈಟು ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಬಜೆಪಿ ನಾಯಕರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್ ಸೋಮವಾರ ಉನ್ನತಮಟ್ಟದ ಸಭೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ವರ್ಗಾವಣೆಗೊಳಿಸಿ ಮೌಖಿಕ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ. ಜತೆಗೆ ಕಾರ್ಯದರ್ಶಿ, ಎಇಇ ಅವರನ್ನು ಕೂಡಾ ವರ್ಗಾವಣೆಗೊಳಿಸಲಾಗಿದೆ. ಇದು ಅಧಿಕಾರಿಗಳ ವಿರುದ್ಧದ ಕ್ರಮವಲ್ಲ ಬದಲಾಗಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.
ಇನ್ನು ಈ ಪ್ರಕರಣದ ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳಾದ ವೆಂಕಟಾಚಲಪತಿ, ಅವಳಗಿ ಹಾಗೂ ನಾಲ್ಕು ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತ್ತು ಈ ಪ್ರಕರಣ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
ಇನ್ನು ಈ ಪ್ರಕರಣ ಮುಗಿಯುವವರೆಗೆ ಮುಂದಿನ ಒಂದು ತಿಂಗಳು ಯಾವುದೇ ಸೈಟು ಹಂಚಿಕೆ ಮಾಡದಂತೆ ಭೈರತಿ ಸುರೇಶ್ ಸೂಚಿಸಿದ್ದಾರೆ. ಜತೆಗೆ ಬಿಜೆಪಿ ಅವಧಿಯಲ್ಲಿ ಹಂಚಿಕೆ ಮಾಡಲಾಗಿದ್ದ ಸೈಟುಗಳಿಗೆ ಸ್ಟೇ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…