ಮೈಸೂರು: ಮೈಸೂರು ನಗರಾಭಿವೃದೀ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರ ತಲೆ ತಂಡವಾಗಿದೆ.
ಮುಡಾದಲ್ಲಿ 50:50 ಸೈಟು ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಬಜೆಪಿ ನಾಯಕರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್ ಸೋಮವಾರ ಉನ್ನತಮಟ್ಟದ ಸಭೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ವರ್ಗಾವಣೆಗೊಳಿಸಿ ಮೌಖಿಕ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ. ಜತೆಗೆ ಕಾರ್ಯದರ್ಶಿ, ಎಇಇ ಅವರನ್ನು ಕೂಡಾ ವರ್ಗಾವಣೆಗೊಳಿಸಲಾಗಿದೆ. ಇದು ಅಧಿಕಾರಿಗಳ ವಿರುದ್ಧದ ಕ್ರಮವಲ್ಲ ಬದಲಾಗಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.
ಇನ್ನು ಈ ಪ್ರಕರಣದ ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳಾದ ವೆಂಕಟಾಚಲಪತಿ, ಅವಳಗಿ ಹಾಗೂ ನಾಲ್ಕು ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತ್ತು ಈ ಪ್ರಕರಣ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
ಇನ್ನು ಈ ಪ್ರಕರಣ ಮುಗಿಯುವವರೆಗೆ ಮುಂದಿನ ಒಂದು ತಿಂಗಳು ಯಾವುದೇ ಸೈಟು ಹಂಚಿಕೆ ಮಾಡದಂತೆ ಭೈರತಿ ಸುರೇಶ್ ಸೂಚಿಸಿದ್ದಾರೆ. ಜತೆಗೆ ಬಿಜೆಪಿ ಅವಧಿಯಲ್ಲಿ ಹಂಚಿಕೆ ಮಾಡಲಾಗಿದ್ದ ಸೈಟುಗಳಿಗೆ ಸ್ಟೇ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…