ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅವರು, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ರಾಜೀವ್ ಅವರು ಒಂದೇ ದಿನ ಇಷ್ಟೊಂದು ನಿವೇಶನ ತೆಗೆದುಕೊಂಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಮುಡಾ ಹಗರಣ ಸಂಬಂಧ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆಯಾಗುತ್ತಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ರಕ್ಷಿಸುವ ಮಾತೇ ಇಲ್ಲ. ತಪ್ಪು ಮಾಡಿರುವವರ ವಿರುದ್ಧ ಕಾನೂನು ಕ್ರಮ ಆಗಲಿದೆ. ಎಚ್.ವಿ.ರಾಜೀವ್ ಅವರ ವಿಚಾರ ತಿಳಿದ ಮೇಲೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಅಲ್ಲಿಯವರೆಗೂ ಏನನ್ನೂ ಮಾತನಾಡಲ್ಲ ಎಂದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…