ಮೈಸೂರು ನಗರ

ಮುಡಾ ಅನುದಾನ ಬಳಕೆ ಮಾಡುವುದು ತಪ್ಪಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ವ್ಯಾಪ್ತಿಯಲ್ಲಿ ಬರುವ ಶ್ರೀರಂಗಪಟ್ಟಣ ಹಾಗೂ ವರುಣ ಕ್ಷೇತ್ರದ ಅಭಿವೃದ್ಧಿಗೆ ಹಣ ಖರ್ಚು ಮಾಡಲಾಗುತ್ತದೆ. ಸಾರ್ವಜನಿಕರ ಕ್ಷೇತ್ರದ ಅಭಿವೃದ್ಧಿ ಕಾನೂನು ಪ್ರಕಾರ ಆಗಿದೆಯೇ ಹೊರತು ದುರುಪಯೋಗ ಆಗಿಲ್ಲ. ಮುಡಾ ಹಣ ಬಳಕೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಇನ್ನು ಪ್ರಪಂಚದಲ್ಲೇ ನಮ್ಮ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಯಗಳು ಯಾರೂ ಜಾರಿ ಮಾಡಿಲ್ಲ. ವಿಪಕ್ಷದವರು ರಾಜಕೀಯ ಕಾರಣಕ್ಕಾಗಿ ತಲೆಬುಡವಿಲ್ಲದ ಆರೋಪ ಮಾಡಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಯಾವ ಕಾರಣಕ್ಕಾಗಿ ರಾಜೀನಾಮೆ ಕೊಡಬೇಕು. ಎಲ್ಲಾ ವೃತ್ತಿಯಲ್ಲಿ ತಪ್ಪು ಮಾಡುವವರು ಇದ್ದಾರೆ. ಕಪ್ಪುಚುಕ್ಕೆ ತರುವವರು ಇದ್ದಾರೆ ಎಂದು ಅಪ್ಪನ ಪರ ಬ್ಯಾಟ್‌ ಮಾಡಿದರು.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

4 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago