ಮೈಸೂರು: ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಜೆಸಿಬಿಗಳು ಘರ್ಜಿಸಿದ್ದು, 8 ಎಕರೆ 28 ಗುಂಟೆ ಜಾಗವನ್ನು ಮುಡಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಇಂದು ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆದಿದೆ.
ಹಲವಾರು ವರ್ಷಗಳಿಂದ ವಾಸವಿದ್ದ ಜನರು ಸ್ವಲ್ಪ ಕಾಲವಕಾಶ ನೀಡಿ ಎಂದು ಅಳಲು ತೋಡಿಕೊಂಡರೂ ಬಿಡದ ಮುಡಾ ಅಧಿಕಾರಿಗಳು ಮನೆಗಳ ತೆರವಿಗೆ ಮುಂದಾದರು. ಈ ವೇಳೆ ನಿವಾಸಿಗಳ ಹಾಗೂ ಮುಡಾ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು.
ಬಳಿಕ ಪೊಲೀಸರ ಸರ್ಪಗಾವಲಿನಲ್ಲಿ ನಡೆದ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸರ್ವೇ ನಂಬರ್ 108, 109ರ ಜಾಗವನ್ನು ವಶಪಡಿಸಿಕೊಳ್ಳಲಾಯಿತು. ಕಳೆದ 2002ರಲ್ಲಿ 8 ಎಕರೆ ಜಾಗಕ್ಕೆ ಮುಡಾ 4 ಲಕ್ಷ ಪರಿಹಾರ ನೀಡಿತ್ತು. ಆದರೆ ನಿವಾಸಿಗಳು
ಮೂಡ ನೀಡಿದ್ದ ಪರಿಹಾರ ತೆಗೆದುಕೊಳ್ಳಲಿಲ್ಲ ಎನ್ನಲಾಗಿದ್ದು, ಮೂಡ ಅಧಿಕಾರಿಗಳ ಬಳಿ ಕಾಲಾವಕಾಶ ಕೇಳಿಕೊಂಡಿದ್ದರು.
ಸದ್ಯ ಈ ಪ್ರಕರಣ ಹೈ ಕೋರ್ಟ್ನ ಡಬಲ್ ಬೆಂಚ್ನಲ್ಲಿದೆ.
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …